ಬ್ರೇಕಿಂಗ್ ನ್ಯೂಸ್
13-09-20 01:27 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್.13: ದೆಹಲಿ ಗಲಭೆಗೆ ಸಂಬಂಧಿಸಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಮಾಜಿ ಆಪ್ ಮುಖಂಡ ಯೋಗೇಂದ್ರ ಯಾದವ್, ಆರ್ಥಿಕ ತಜ್ಞೆ ಜಯತಿ ಘೋಷ್, ದೆಹಲಿ ಯುನಿವರ್ಸಿಟಿ ಪ್ರೊಫೆಸರ್ ಅಪೂರ್ವಾನಂದ ಅವರ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ ಸೇರಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಗಲಭೆಯಲ್ಲಿ ಬಂಧಿತರಾದ ಜೆಎನ್ ಯು ಮತ್ತು ಜಾಮಿಯಾ ವಿವಿಯ ವಿದ್ಯಾರ್ಥಿಗಳು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ್ದು, ಅದರಲ್ಲಿ ಯೆಚೂರಿ ಸೇರಿದಂತೆ ಹಲವರ ಹೆಸರು ಸೇರ್ಪಡೆಯಾಗಿದೆ. ಗಲಭೆಗೆ ಪ್ರಚೋದನೆ ಮತ್ತು ಸಂಚು ರೂಪಿಸಿದ ಆರೋಪವನ್ನು ಇವರ ಮೇಲೆ ಹೊರಿಸಲಾಗಿದೆ.

ಫೆಬ್ರವರಿ 23ರಿಂದ 26ರ ವರೆಗೆ ನಡೆದಿದ್ದ ಗಲಭೆಯನ್ನು ಹತ್ತಿಕ್ಕಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಗಲಭೆಯಲ್ಲಿ 53 ಮಂದಿ ಸಾವಿಗೀಡಾಗಿದ್ದರೆ, 581 ಮಂದಿ ಗಾಯಗೊಂಡಿದ್ದರು. ಜಯತಿ ಘೋಷ್, ಅಪೂರ್ವಾನಂದ ಮತ್ತು ರಾಹುಲ್ ರಾಯ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಜಾಮಿಯಾ ಕೋರ್ಡಿನೇಶನ್ ಕಮಿಟಿಗಳ ಪ್ರತಿಭಟನೆಗೆ ಬೆಂಬಲವಾಗಿ ನಿಂತಿದ್ದರು. ಸಿಎಎ ಪ್ರತಿಭಟನೆ ಇನ್ನಷ್ಟು ಮುಂದುವರಿಯುವಂತೆ ಹಿಂಭಾಗದಿಂದ ಸಂಚು ರೂಪಿಸುತ್ತಿದ್ದರು. ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ಪ್ರಚೋದನೆ ನೀಡುತ್ತಿದ್ದುದಾಗಿ ಬಂಧಿತ ಜೆಎನ್ ಯು ವಿದ್ಯಾರ್ಥಿನಿಯರಾದ ದೇವಾಂಗನ ಕಲಿತಾ ಮತ್ತು ನಟಾಶಾ ನರ್ವಾಲ್ ಪೊಲೀಸರಿಗೆ ಹೇಳಿಕೆ ನೀಡಿದ್ದರು.

ಸೀತಾರಾಂ ಯೆಚೂರಿ, ಯೋಗೇಂದ್ರ ಯಾದವ್, ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್, ಉಮರ್ ಖಾಲಿದ್, ಲಾಯರ್ ಮಹಮೂದ್ ಪ್ರಾಚಾ ಹೀಗೆ ಪ್ರಮುಖ ನಾಯಕರು ಸೇರಿ ನಮ್ಮನ್ನು ಪ್ರಚೋದಿಸಿದ್ದರು. ವಿದ್ಯಾರ್ಥಿಗಳೆಲ್ಲ ಸೇರಿ ಭಾರತ ಸರಕಾರದ ಪ್ರತಿಷ್ಠೆ, ಗೌರವಕ್ಕೆ ಧಕ್ಕೆ ಬರುವಂತೆ ಜನರನ್ನು ಸೇರಿಸಿ ಘೋಷಣೆ ಕೂಗುವಂತೆ ಪ್ರೇರಣೆ ನೀಡಿದ್ದರು ಎಂದು ಜಾಮಿಯಾ ವಿವಿಯ ವಿದ್ಯಾರ್ಥಿನಿ ಫಾತಿಮಾ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾಳೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm