ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am