ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm