ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm