ಬ್ರೇಕಿಂಗ್ ನ್ಯೂಸ್
29-11-21 02:12 pm HK Desk news ದೇಶ - ವಿದೇಶ
ನವದೆಹಲಿ, ನ.29: ವಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳ ಸಂಸದರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ವಿವಾದಿತ ಕೃಷಿ ಮಸೂದೆಗಳನ್ನು ಬಿಜೆಪಿ ಸರಕಾರ ಅಧಿಕೃತವಾಗಿ ಹಿಂಪಡೆದುಕೊಂಡಿದೆ. ಕಾಂಗ್ರೆಸ್ ನಾಯಕರು ಕೃಷಿ ಮಸೂದೆ ಹಿಂತೆಗೆತದ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಆದರೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮಸೂದೆಗಳನ್ನು ಹಿಂಪಡೆಯುವ ಬಗ್ಗೆ ಸದನಕ್ಕೆ ಓದಿ ಹೇಳಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರು ಸದನದ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಕೇಳಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ, ಧಿಕ್ಕಾರ, ಬೊಬ್ಬೆ ಹಾಕುತ್ತಲೇ ಸ್ಪೀಕರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದರ ನಡುವೆಯೇ, ಬಿಜೆಪಿ ಸಂಸದರು ಧ್ವನಿಮತದ ಮೂಲಕ ಮಸೂದೆಯನ್ನು ಹಿಂಪಡೆಯುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಸದನದ ಒಪ್ಪಿಗೆ ಪಡೆದಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು, ಕಾಂಗ್ರೆಸ್ ನಾಯಕರು ಶಾಂತಿಯಿಂದ ವರ್ತಿಸಿದರೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಗಳ ವಿರುದ್ಧ ಒಂದು ವರ್ಷದ ಪರ್ಯಂತ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು.
ನವೆಂಬರ್ ಆರಂಭದಲ್ಲಿ ಪ್ರಧಾನಿ ಮೋದಿ ದಿಢೀರ್ ಆಗಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದರು. ಇದೇ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಮಸೂದೆ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಮಸೂದೆಗಳನ್ನು ಹಿಂಪಡೆದಿದ್ದು, ವಿಪಕ್ಷಗಳು ಮತ್ತು ಕೃಷಿಕರ ಪರ ಸಂಘಟನೆಗಳ ವಿರೋಧಕ್ಕೆ ಮಣೆ ಹಾಕಲಾಗಿದೆ.
The 25-day Winter Session of parliament, during which over 30 bills are expected to be passed, began today. A crucial bill to cancel farm laws was passed in Lok Sabha in the fastest repeal in recent years amid protests by the opposition.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm