ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm