ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm