ಬ್ರೇಕಿಂಗ್ ನ್ಯೂಸ್
14-09-20 03:46 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 14: ಶಿವಸೈನಿಕರ ಬೆದರಿಕೆ ಲೆಕ್ಕಿಸದೆ ಮುಂಬೈಗೆ ಬಂದು ಶಿವಸೇನೆ ಮತ್ತು ಮಹಾರಾಷ್ಟ್ರ ಸರಕಾರದ ಜೊತೆ ಜಟಾಪಟಿಗಿಳಿದಿದ್ದ ನಟಿ ಕಂಗನಾ ರಣೌತ್ ಮುಂಬೈ ಬಿಟ್ಟು ತೆರಳಿದ್ದಾರೆ. ತನ್ನ ಸ್ವಂತ ಊರು ಹಿಮಾಚಲ ಪ್ರದೇಶದ ಮನಾಲಿಗೆ ನಿರ್ಗಮಿಸುವ ಮಧ್ಯೆ ಕಂಗನಾ ಮತ್ತೆ ಟ್ವೀಟ್ ಮಾಡಿದ್ದು, ತನ್ನ ಮಾತುಗಳಿಗೆ ಬದ್ಧಳಿರುವುದಾಗಿ ಪುನರುಚ್ಚರಿಸಿದ್ದಾರೆ.
ಮುಂಬೈಯಿಂದ ಒಡೆದ ಹೃದಯದೊಂದಿಗೆ ಹಿಂತಿರುಗುತ್ತಿದ್ದೇನೆ. ಶಿವಸೈನಿಕರು ನಿರಂತರ ದಾಳಿಯಿಂದ ನನ್ನನ್ನು ಭೀತಿಗೊಳಿಸಿದ್ದರು. ಮುಂಬೈಯನ್ನು ನಾನು ಪಿಓಕೆಗೆ ಹೋಲಿಸಿದ್ದಕ್ಕೇ ಇಷ್ಟೆಲ್ಲಾ ಮಾಡಿದ್ದಾರೆ. ಆದರೆ ನನ್ನ ಮಾತುಗಳಿಗೆ ಬದ್ಧಳಿದ್ದೇನೆ ಎಂದಿದ್ದಾರೆ. ಇಂದು ಬೆಳಗ್ಗೆ ಮುಂಬೈನಿಂದ ತನ್ನೂರಿಗೆ ಹೊರಟ ಕಂಗನಾ ಚಂಡೀಗಢ ತಲುಪಿದಾಗ ಹಿಂದಿಯಲ್ಲಿ ಟ್ಟೀಟ್ ವಾರ್ ಮುಂದುವರಿಸಿದ್ದಾರೆ. ಒಂದು ವಾರದಲ್ಲಿ ಮುಂಬೈನಲ್ಲಿದ್ದು ನಾನು ಬದುಕಿ ಬಂದಿದ್ದೇ ಹೆಚ್ಚು. ತುಂಬ ಆತಂಕದಿಂದಲೇ ಒಂದು ವಾರವನ್ನು ಕಳೆದಿದ್ದೇನೆ. ನನ್ನ ಕಚೇರಿಯನ್ನು ಪುಡಿಗಟ್ಟಿದರು. ಒಂದು ಕಾಲದಲ್ಲಿ ಮುಂಬೈ ನನ್ನನ್ನು ತಾಯಿಯಂತೆ ಸಲಹಿತ್ತು. ತಾಯಿ ಪ್ರೀತಿ ಸಿಕ್ಕಿತ್ತು. ಆದರೆ, ಈಗಿನ ಸನ್ನಿವೇಶದಲ್ಲಿ ನಾನು ಅಲ್ಲಿಂದ ಬದುಕಿ ಬರುತ್ತಿರುವುದೇ ಅದೃಷ್ಟ ಅನ್ನುವಂತಾಗಿದೆ. ಶಿವಸೇನೆ ಈಗ ಸೋನಿಯಾ ಸೇನೆ ಆಗಿದೆ. ಅಲ್ಲಿನ ಆಡಳಿತದಲ್ಲಿ ಭಯೋತ್ಪಾದಕರು ತುಂಬಿಕೊಂಡಿದ್ದಾರೆ ಎಂದು ಬರೆದಿದ್ದಾರೆ. ಅಲ್ಲದೆ, ಚಂಡೀಗಢದಿಂದ ದೂರ ಹೋಗುತ್ತಿದ್ದಂತೆ ನನ್ನ ಭದ್ರತೆಯೂ ಕಡಿಮೆಯಾಗಲಿದೆ. ಅಭಿಮಾನಿಗಳ ಹಾರೈಕೆಯಿಂದ ಸಹಜ ಬದುಕಿಗೆ ತೆರೆದುಕೊಳ್ಳಲಿದ್ದೇನೆ ಎಂದಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ವಿಚಾರದಲ್ಲಿ ಟ್ವೀಟ್ ವಾರ್ ನಡೆಸಿದ್ದ ಕಂಗನಾ ರನೌತ್ ಗೆ ಶಿವಸೇನೆ ಬೆದರಿಕೆ ಹಾಕಿತ್ತು. ನೀನು ಮುಂಬೈಗೆ ಬಂದರೆ ನೋಡಿಕೊಳ್ತೀವಿ ಎಂದಿದ್ದ ಸವಾಲನ್ನು ಸ್ವೀಕರಿಸಿದ್ದ ನಟಿ ಕಂಗನಾ, ವೈ ಪ್ಲಸ್ ಭದ್ರತೆಯೊಂದಿಗೆ ಕಳೆದ ವಾರ ಮುಂಬೈಗೆ ಬಂದಿದ್ದರು. ಆದರೆ ಮುಂಬೈಗೆ ಬಂದು ತನ್ನ ಕಚೇರಿ ತಲುಪುವಷ್ಟರಲ್ಲಿ ಶಿವಸೇನೆ ಸರಕಾರ ಆಕೆಯ ಕಚೇರಿ ಇದ್ದ ಕಟ್ಟಡವನ್ನು ಅಕ್ರಮ ಎಂಬ ಕಾರಣಕ್ಕೆ ಕೆಡವಲು ಶುರು ಮಾಡಿತ್ತು. ಆಬಳಿಕ ಬಾಂಬೈ ಹೈಕೋರ್ಟ್ ಕಟ್ಟಡ ಕೆಡಹುವುದಕ್ಕೆ ತಡೆ ಹಾಕಿತ್ತು. ಆದರೆ ಅಷ್ಟರಲ್ಲಿ ಕಚೇರಿಯ ಆಸುಪಾಸು ಕೆಡವಿ ಆಗಿತ್ತು. ಇದೇ ವಿಚಾರ ಕಂಗನಾ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಶಿವಸೇನೆ ವಿರುದ್ಧ ನಿರಂತರ ಟ್ವೀಟ್ ವಾರ್ ನಡೆಸಿದ್ದು ದೇಶದ ಗಮನ ಸೆಳೆದಿತ್ತು. ಮಹಾರಾಷ್ಟ್ರ ಸರಕಾರವನ್ನೇ ಎದುರು ಹಾಕ್ಕೊಂಡ ದಿಟ್ಟ ಮಹಿಳೆ ಎಂಬ ಹೆಗ್ಗಳಿಕೆಯನ್ನೂ ಕಂಗನಾ ಪಡೆದಿದ್ದರು. ಐದು ದಿನ ಮುಂಬೈನಲ್ಲಿದ್ದ ಕಂಗನಾ, ಮಹಾರಾಷ್ಟ್ರ ಸರಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರನ್ನು ಭೇಟಿಯಾಗಿದ್ದರು.
With a heavy heart leaving Mumbai, the way I was terrorised all these days constant attacks and abuses hurled at me attempts to break my house after my work place, alert security with lethal weapons around me, must say my analogy about POK was bang on. https://t.co/VXYUNM1UDF
— Kangana Ranaut (@KanganaTeam) September 14, 2020
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm