ಬ್ರೇಕಿಂಗ್ ನ್ಯೂಸ್
14-12-21 12:11 pm HK Desk news ದೇಶ - ವಿದೇಶ
ಕಾಸರಗೋಡು, ಡಿ.14 : ಕಾಸರಗೋಡು ಬ್ಲಾಕ್ ಪಂಚಾಯತ್ ಬಿಜೆಪಿ ಸದಸ್ಯೆಯೊಬ್ಬರಿಗೆ ಉಗ್ರವಾದ ಮತ್ತು ಲವ್ ಜಿಹಾದ್ ಬೆಂಬಲಿಸಿ ಬರೆದ ಕರಪತ್ರಗಳನ್ನು ಪೋಸ್ಟ್ ನಲ್ಲಿ ಕಳಿಸಲಾಗಿದ್ದು, ಆತಂಕ ವ್ಯಕ್ತವಾಗಿದೆ.
ಬದಿಯಡ್ಕ ಸಮೀಪದ ಪೆರಡಾಲ ಡಿವಿಶನ್ ಪ್ರತಿನಿಧಿಸುವ ಬಿಜೆಪಿಯ ಕೆ.ಎಂ.ಅಶ್ವಿನಿ ಅವರಿಗೆ ಈ ರೀತಿಯ ವಿಕೃತ ಪೋಸ್ಟ್ ಮಾಡಲಾಗಿದ್ದು, ಆಕೆಯ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಕರಪತ್ರಗಳನ್ನು ಪೋಸ್ಟ್ ಮೂಲಕ ಅಶ್ವಿನಿ ಅವರ ವಿಳಾಸಕ್ಕೆ ಕಳಿಸಲಾಗಿತ್ತು. ಅಶ್ವಿನಿ ಕರಪತ್ರಗಳನ್ನು ಬದಿಯಡ್ಕ ಠಾಣೆಗೆ ಒಪ್ಪಿಸಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಶ್ವಿನಿ ಅವರು ನೀರ್ಚಾಲು ಸಮೀಪದ ಓಣಿಯಡ್ಕ ಎಂಬಲ್ಲಿ ವಾಸವಿದ್ದಾರೆ. ಈಕೆಯ ವಿಳಾಸಕ್ಕೆ ಪೋಸ್ಟ್ ನಲ್ಲಿ ಕರಪತ್ರಗಳನ್ನು ಕಳುಹಿಸಲಾಗಿತ್ತು. ಕಳುಹಿಸಿದವರ ವಿಳಾಸ ಕುರಾನ್ ಎಜುಕೇಶನ್, ಪೋಸ್ಟ್ ಬಾಕ್ಸ್ ನಂಬರ್ 58, ಮಂಜೇರಿ, ಮಲಪ್ಪುರಂ ಎಂದು ಬರೆಯಲಾಗಿತ್ತು.
ಒಂದು ಕರಪತ್ರದಲ್ಲಿ ಭೂಮಿ ತಿರುಗುವುದನ್ನು ಹೇಗೆ ನಿಲ್ಲಿಸುವುದು ಎಂಬ ಬಗ್ಗೆ ಉಪದೇಶದ ವಾಕ್ಯಗಳಿವೆ. ತಮಿಳು, ಇಂಗ್ಲಿಷ್, ಅರೇಬಿಕ್ ಭಾಷೆಯಲ್ಲಿ ಉಗ್ರವಾದ ಮತ್ತು ಲವ್ ಜಿಹಾದ್ ಪರವಾಗಿ ಬರೆಯಲಾಗಿದೆ. ಕರಪತ್ರದ ಕೆಳಗಡೆ ಮುಹಿಯುದ್ದೀನ್ ಮೊಹಮ್ಮದ್ ಇರುಂಬುಝಿ ಎಂಬ ಹೆಸರನ್ನೂ ಬರೆಯಲಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಮಂದಿಗೆ ನನ್ನ ವಿಳಾಸ ಸಿಕ್ಕಿದ್ದು ಹೇಗೆ ಎಂದು ಅಶ್ವಿನಿ ಅಚ್ಚರಿಗೆ ಒಳಗಾಗಿದ್ದಾರೆ. ಇದರ ಹಿಂದೆ ಉಗ್ರವಾದ ಬೆಂಬಲಿಸುವ ಸ್ಥಳೀಯರ ಕೈವಾಡ ಇರುವ ಶಂಕೆಯನ್ನು ಅಶ್ವಿನಿ ವ್ಯಕ್ತಪಡಿಸಿದ್ದಾರೆ.
A member of Kasargod block panchayat has received three pamphlets by post, the contents of which support t terrorism and Love Jihad. K M Ashwini from the BJP who represents Peradala division in the block panchayat received these pamphlets. She has since handed them over to the Badiadka police station. The police have registered a case and begun an investigation.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm