ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm