ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm