ಬ್ರೇಕಿಂಗ್ ನ್ಯೂಸ್
15-09-20 12:58 pm Headline Karnataka News Network ದೇಶ - ವಿದೇಶ
ಅಮರಾವತಿ, ಸೆಪ್ಟಂಬರ್ 15: ಆಂಧ್ರಪ್ರದೇಶದಲ್ಲಿ ವಿಧಾನ ಪರಿಷತ್ ರದ್ದುಗೊಳಿಸಲು ಕೇಂದ್ರ ಸರಕಾರ ಆದಷ್ಟು ಬೇಗ ನಿರ್ಣಯ ತೆಗೆದುಕೊಳ್ಳಬೇಕೆಂದು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ವೈಎಸ್ಆರ್ ಪಕ್ಷದ ಸಂಸದರಿಗೆ ಜಗನ್ ರೆಡ್ಡಿ ಸೂಚನೆ ನೀಡಿದ್ದಾರೆ. ಎಪಿ ದಿಶಾ ಕ್ರಿಮಿನಲ್ ಲಾ (ತಿದ್ದುಪಡಿ) ಕಾಯ್ದೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ರಾಷ್ಟ್ರಪತಿ ಅಂಕಿತ ಬೀಳುವಂತೆ ಮಾಡಲು ಕೇಂದ್ರವನ್ನು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭೆ ಕಳೆದ ಜನವರಿ 27ರಂದು ವಿಧಾನ ಪರಿಷತ್ ರದ್ದುಗೊಳಿಸಲು ನಿರ್ಣಯ ತೆಗೆದುಕೊಂಡಿತ್ತು. ಆದರೆ ಸಂವಿಧಾನಾತ್ಮಕ ಅಂಗವೊಂದನ್ನು ರದ್ದುಪಡಿಸಲು ಕೇಂದ್ರ ಸರಕಾರದ ಅನುಮತಿ ಬೇಕಾಗುತ್ತದೆ. ಅದಕ್ಕಾಗಿ ಈಗ ಸಂಸತ್ತಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ತನ್ನ ಸಂಸದರಿಗೆ ಜಗನ್ ರೆಡ್ಡಿ ಒತ್ತಾಯಿಸಿದ್ದಾರೆ. 58 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ತೆಲುಗು ದೇಶಂ ಪಕ್ಷದ ಸದಸ್ಯರು ಬಹುಮತ ಹೊಂದಿದ್ದು, ಶಾಸನ ಸಭೆಯಲ್ಲಿ ಪಾಸ್ ಮಾಡಿದ ಪ್ರಮುಖ ಮಸೂದೆಗಳು ಜಾರಿಯಾಗದೆ ಉಳಿದುಕೊಂಡಿವೆ. ಇದಕ್ಕಾಗಿ ವಿಧಾನ ಪರಿಷತ್ತನ್ನೇ ರದ್ದುಪಡಿಸುವ ಅಪಾಯಕಾರಿ ನಡೆಗೆ ಅಲ್ಲಿನ ಮುಖ್ಯಮಂತ್ರಿ ಮುಂದಾಗಿದ್ದಾರೆ.
ಕಳೆದ ವರ್ಷ ಯುವತಿ ಒಬ್ಬಳ ರೇಪ್ ಅಂಡ್ ಮರ್ಡರ್ ಪ್ರಕರಣ ಸಂಚಲನ ಮೂಡಿಸಿದ ಸಂದರ್ಭದಲ್ಲಿ ಶೀಘ್ರ ತನಿಖೆಗಾಗಿ ಆಂಧ್ರ ಪ್ರದೇಶ ಸರಕಾರ ದಿಶಾ ಹೆಸರಲ್ಲಿ ಎಪಿ ದಿಶಾ ಕ್ರಿಮಿನಲ್ ಬಿಲ್ ತಂದಿತ್ತು. ಆದರೆ ಈ ಮಸೂದೆ ರಾಷ್ಟ್ರಪತಿ ಅಂಕಿತ ಸಿಗದೆ ಇನ್ನೂ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ವಿಧಾನ ಪರಿಷತ್ ರದ್ದು ಮತ್ತು ರಾಷ್ಟ್ರಪತಿ ಅಂಕಿತ ಎರಡು ವಿಚಾರದಲ್ಲೂ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಿಎಂ ಜಗನ್ ರೆಡ್ಡಿ ತಂತ್ರ ರೂಪಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm