ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm