ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.
ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.
ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm