ಬ್ರೇಕಿಂಗ್ ನ್ಯೂಸ್
30-12-21 01:56 pm HK Desk news ದೇಶ - ವಿದೇಶ
ಭೋಪಾಲ್, ಡಿ.30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಾಚ್ಯವಾಗಿ ನಿಂದಿಸಿ, ನಾಥುರಾಮ್ ಗೋಡ್ಸೆಯನ್ನು ವೈಭವೀಕರಿಸಿ ಹೇಳಿಕೆ ನೀಡಿದ್ದ ಹಿಂದು ಸಂತ ಕಾಳಿಚರಣ್ ಮಹಾರಾಜ್ ಸ್ವಾಮಿಯನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ.
ಡಿ.25-26ರಂದು ಛತ್ತೀಸ್ ಗಢ ರಾಜಧಾನಿ ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಕಾಳಿಚರಣ್ ಮಹಾರಾಜ್, ಭಾರತ ವಿಭಜನೆ, ಹಿಂದು- ಮುಸ್ಲಿಂ ದ್ವೇಷದ ಬಗ್ಗೆ ಮಾತನಾಡಿದ್ದರು. ಅಖಂಡ ಭಾರತವನ್ನು ವಿಭಜಿಸಿದ ಗಾಂಧೀಜಿಯನ್ನು ನಿಂದಿಸುವ ಭರದಲ್ಲಿ ನಾಥುರಾಮ್ ಗೋಡ್ಸೆ ಕೆಲಸವನ್ನು ಅಭಿನಂದಿಸುವುದಾಗಿ ಹೇಳಿದ್ದರು.
ಮಹಾರಾಜ್ ಹೇಳಿಕೆಯ ಬಗ್ಗೆ ಭಾರೀ ಆಕ್ಷೇಪ ಕೇಳಿಬಂದಿದ್ದು, ಛತ್ತೀಸ್ ಗಢ, ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ ಪೊಲೀಸ್ ದೂರು ದಾಖಲಾಗಿದ್ದು, ಎಫ್ಐಆರ್ ಆಗಿತ್ತು. ಈ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಪೊಲೀಸರು ಮಹಾರಾಜ್ ಬಂಧನಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದರು. ಎರಡು ತಂಡಗಳು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಕ್ಕೆ ಬಂದಿದ್ದವು. ಬಂಧನ ಭೀತಿಯಲ್ಲಿ ಅಡಗಿಕೊಂಡಿದ್ದ ಸ್ವಾಮಿಯ ಪತ್ತೆಗಾಗಿ ಪೊಲೀಸರು ಬೆನ್ನು ಬಿದ್ದಿದ್ದರು. ಮಧ್ಯಪ್ರದೇಶಕ್ಕೆ ಬಂದಿದ್ದ ಪೊಲೀಸರು ಇಂದು ನಸುಕಿನಲ್ಲಿ ಕಾಳಿಚರಣ್ ಮಹಾರಾಜ್ ಸ್ವಾಮಿಯನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಖಜುರಾಹೋ ಬಳಿಯಿಂದ 25 ಕಿಮೀ ದೂರದ ಬಾಗೇಶ್ವರ್ ಧಾಮ್ ಎಂಬಲ್ಲಿ ಕಾಳಿಚರಣ್ ಬಾಡಿಗೆ ಕೊಠಡಿಯಲ್ಲಿದ್ದರು. ಅಲ್ಲಿಂದ ಪೊಲೀಸರು ಇಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ರಾಯ್ಪುರಕ್ಕೆ ಕರೆತರಲಾಗುತ್ತಿದೆ ಎಂದು ರಾಯ್ಪುರ ಎಸ್ಪಿ ಪ್ರಶಾಂತ್ ಅಗರ್ವಾಲ್ ತಿಳಿಸಿದ್ದಾರೆ. ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶಕ್ಕೆ ಬಂದು ಕಾರ್ಯಾಚರಣೆ ನಡೆಸಿದ ವೇಳೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದ್ದೇ ಇದ್ದುದಕ್ಕೆ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ಷೇಪ ವ್ಯಕ್ತಪಡಿಸಿದ್ದು ಈ ಬಗ್ಗೆ ಛತ್ತೀಸ್ ಗಢ ಸರಕಾರದ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ದೇಶ ಇಸ್ಲಾಮೀಕರಣ ಮಾಡಲು ಹೊರಟಿದ್ದಾರೆ
ರಾಜಕೀಯದ ಮೂಲಕ ದೇಶವನ್ನು ಇಸ್ಲಾಮೀಕರಣ ಮಾಡಲು ಕೆಲವರು ಹೊರಟಿದ್ದಾರೆ. ಮಹಾತ್ಮ ಗಾಂಧೀಜಿಯವರು ಈ ದೇಶವನ್ನು ಮತದ ಆಧಾರದಲ್ಲಿ ವಿಭಜಿಸಿ ಹಾಳು ಮಾಡಿದ್ರು. ಅವರನ್ನು ಕೊಂದ ಗೋಡ್ಸೆಯನ್ನು ನಾನು ಅಭಿನಂದಿಸುತ್ತೇನೆ, ಸೆಲ್ಯೂಟ್ ಹೊಡೆಯುತ್ತೇನೆ ಎಂದು ಕಾಳಿಚರಣ್ ಮಹಾರಾಜ್ ಹೇಳಿಕೆ ನೀಡಿದ್ದರು. ಅಲ್ಲದೆ, ಹಿಂದು ನಾಯಕರನ್ನೇ ಜನರು ಆಯ್ಕೆ ಮಾಡಬೇಕು. ಆಮೂಲಕ ಹಿಂದು ಧರ್ಮವನ್ನು ಉಳಿಸಬೇಕು ಎಂದು ಹೇಳಿದ್ದರು. ಇದೇ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಯ್ಪುರದ ಮಾಜಿ ಮೇಯರ್ ಕೂಡ ಆಗಿರುವ ಕಾಂಗ್ರೆಸ್ ನಾಯಕ ಪ್ರಮೋದ್ ದುಬೇ, ಗಾಂಧೀಜಿಯನ್ನು ನಿಂದಿಸಿದ ಕಾಳಿಚರಣ್ ವಿರುದ್ಧ ಪೊಲೀಸ್ ದೂರು ನೀಡಿದ್ದರು.
Kalicharan Maharaj, who made derogatory remarks against Mahatma Gandhi at a Dharam Sansad, has been arrested by the Raipur Police,
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm