ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm