ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm