ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am