ಬ್ರೇಕಿಂಗ್ ನ್ಯೂಸ್
08-01-22 08:50 pm HK Desk news ದೇಶ - ವಿದೇಶ
ಆಂಧ್ರಪ್ರದೇಶ, ಜ 08: ಸಾಲಬಾಧೆಯಿಂದಾಗಿ ತೆಲಂಗಾಣದ ಕುಟುಂಬವೊಂದರ ನಾಲ್ವರು ಸದಸ್ಯರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ(54), ಆಶಿಷ್(22), ಸುರೇಶ್ (56) ಹಾಗೂ ಅಖಿಲ್(28) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತೆಲಂಗಾಣದ ಈ ಕುಟುಂಬ ಆಂಧ್ರಪ್ರದೇಶದ ವಿಜಯವಾಡದಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿತ್ತು. ಇಲ್ಲಿನ ಹೋಟೆಲ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದರು. ಕೆಲ ದಿನಗಳಿಂದ ಇಲ್ಲೇ ಇದ್ದ ಕುಟುಂಬಸ್ಥರು, 'ಸಾಲಬಾಧೆಯಿಂದ ಜೀವನ ಕಷ್ಟವಾಗುತ್ತಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ' ಎಂದು ತಮ್ಮ ಸಂಬಂಧಿಯೊಬ್ಬರಿಗೆ ವಾಯ್ಸ್ ಸಂದೇಶ ಕಳುಹಿಸಿದ್ದರು. ಇದರಿಂದ ಗಾಬರಿಯಾದ ಸಂಬಂಧಿಕರು ಹೋಟೆಲ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರಿದ್ದ ರೂಮ್ಗೆ ಬಂದು ಪರಿಶೀಲಿಸಿದಾಗ ತಾಯಿ ಶ್ರೀಲತಾ ಮತ್ತು ಪುತ್ರ ಆಶಿಷ್ ವಿಷ ಸೇವನೆಯಿಂದ ಸಾವನ್ನಪ್ಪಿದ್ದು ದೃಢಪಟ್ಟಿದೆ.
ವಿಷಯ ತಿಳಿದ ಪೊಲೀಸರು ರೂಮ್ ತಪಾಸಣೆ ನಡೆಸಿದಾಗ 20ಕ್ಕೂ ಅಧಿಕ ಇನ್ಸುಲಿನ್ ಬಾಟಲ್ಗಳು ಪತ್ತೆಯಾಗಿವೆ. ಮೃತಪಟ್ಟ ಆಶಿಷ್ ಬಿ-ಫಾರ್ಮ್ ವಿದ್ಯಾರ್ಥಿಯಾಗಿದ್ದು, ಇವುಗಳ ಬಗ್ಗೆ ಅರಿವಿದ್ದ ಕಾರಣ ಹೆಚ್ಚಾಗಿ ಇನ್ಸುಲಿನ್ ಇಂಜೆಕ್ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದೇ ವೇಳೆ ತಂದೆ ಸುರೇಶ್ ಮತ್ತು ಇನ್ನೊಬ್ಬ ಪುತ್ರ ಅಖಿಲ್ ಕೃಷ್ಣಾ ನದಿಯಲ್ಲಿ ಧುಮುಕಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
In yet another family suicide, four members of a family from Nizamabad district committed suicide in Vijayawada here on Friday night. The deceased were – Suresh, Srilatha and their two sons Ashish and Akhil who came to Vijayawada to have a darshan of Goddess Kanaka Durga. They checked into Sri Kanyakaparameswari cottage.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm