ಬ್ರೇಕಿಂಗ್ ನ್ಯೂಸ್
08-01-22 08:50 pm HK Desk news ದೇಶ - ವಿದೇಶ
ಆಂಧ್ರಪ್ರದೇಶ, ಜ 08: ಸಾಲಬಾಧೆಯಿಂದಾಗಿ ತೆಲಂಗಾಣದ ಕುಟುಂಬವೊಂದರ ನಾಲ್ವರು ಸದಸ್ಯರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ(54), ಆಶಿಷ್(22), ಸುರೇಶ್ (56) ಹಾಗೂ ಅಖಿಲ್(28) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತೆಲಂಗಾಣದ ಈ ಕುಟುಂಬ ಆಂಧ್ರಪ್ರದೇಶದ ವಿಜಯವಾಡದಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿತ್ತು. ಇಲ್ಲಿನ ಹೋಟೆಲ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದರು. ಕೆಲ ದಿನಗಳಿಂದ ಇಲ್ಲೇ ಇದ್ದ ಕುಟುಂಬಸ್ಥರು, 'ಸಾಲಬಾಧೆಯಿಂದ ಜೀವನ ಕಷ್ಟವಾಗುತ್ತಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ' ಎಂದು ತಮ್ಮ ಸಂಬಂಧಿಯೊಬ್ಬರಿಗೆ ವಾಯ್ಸ್ ಸಂದೇಶ ಕಳುಹಿಸಿದ್ದರು. ಇದರಿಂದ ಗಾಬರಿಯಾದ ಸಂಬಂಧಿಕರು ಹೋಟೆಲ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರಿದ್ದ ರೂಮ್ಗೆ ಬಂದು ಪರಿಶೀಲಿಸಿದಾಗ ತಾಯಿ ಶ್ರೀಲತಾ ಮತ್ತು ಪುತ್ರ ಆಶಿಷ್ ವಿಷ ಸೇವನೆಯಿಂದ ಸಾವನ್ನಪ್ಪಿದ್ದು ದೃಢಪಟ್ಟಿದೆ.
ವಿಷಯ ತಿಳಿದ ಪೊಲೀಸರು ರೂಮ್ ತಪಾಸಣೆ ನಡೆಸಿದಾಗ 20ಕ್ಕೂ ಅಧಿಕ ಇನ್ಸುಲಿನ್ ಬಾಟಲ್ಗಳು ಪತ್ತೆಯಾಗಿವೆ. ಮೃತಪಟ್ಟ ಆಶಿಷ್ ಬಿ-ಫಾರ್ಮ್ ವಿದ್ಯಾರ್ಥಿಯಾಗಿದ್ದು, ಇವುಗಳ ಬಗ್ಗೆ ಅರಿವಿದ್ದ ಕಾರಣ ಹೆಚ್ಚಾಗಿ ಇನ್ಸುಲಿನ್ ಇಂಜೆಕ್ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದೇ ವೇಳೆ ತಂದೆ ಸುರೇಶ್ ಮತ್ತು ಇನ್ನೊಬ್ಬ ಪುತ್ರ ಅಖಿಲ್ ಕೃಷ್ಣಾ ನದಿಯಲ್ಲಿ ಧುಮುಕಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
In yet another family suicide, four members of a family from Nizamabad district committed suicide in Vijayawada here on Friday night. The deceased were – Suresh, Srilatha and their two sons Ashish and Akhil who came to Vijayawada to have a darshan of Goddess Kanaka Durga. They checked into Sri Kanyakaparameswari cottage.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm