ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm