ಬ್ರೇಕಿಂಗ್ ನ್ಯೂಸ್
10-01-22 11:11 pm HK Desk news ದೇಶ - ವಿದೇಶ
ಪಾಟ್ನಾ, ಜ.9 : ಕಳೆದ ಒಂದು ವರ್ಷದಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲಾಗುತ್ತಿದೆ. ಸರಕಾರ, ಒಬ್ಬರಿಗೆ ಎರಡು ಬಾರಿ ಉಚಿತ ಲಸಿಕೆ ನೀಡುತ್ತಿದೆ. ಆದರೆ, ಇದರ ದುರ್ಲಾಭವನ್ನು ಪಡೆದ ಮುದುಕನೊಬ್ಬ ಒಂದೇ ವರ್ಷದಲ್ಲಿ ಹನ್ನೊಂದು ಬಾರಿ ಲಸಿಕೆ ಪಡೆದು ಹುಬ್ಬೇರಿಸಿದ್ದಾನೆ.
ಬಿಹಾರದ ಮಾದೇಪುರ ಜಿಲ್ಲೆಯ ಬ್ರಹ್ಮದೇವ ಮಂಡಲ ಎಂಬ 84 ವರ್ಷದ ಮುದುಕ ಈ ವಿಚಿತ್ರ ಸಾಧನೆ ಮಾಡಿದವರು. ಮಾಧೇಪುರ ಜಿಲ್ಲೆಯ ಪುರಿಣಿಯ ನಿವಾಸಿ. ಇವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11 ಬಾರಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಪ್ರತಿ ಬಾರಿ ಲಸಿಕೆ ಹಾಕಿದಾಗ ಆರೋಗ್ಯವಾಗಿದ್ದಾರೆ ಎಂದಿದ್ದರು. ತನ್ನ ಆರೋಗ್ಯ ಸರಿ ಇಲ್ಲದಿದ್ದಾಗ ನಕಲಿ ದಾಖಲೆಗಳ ತೋರಿಸಿ ಲಸಿಕೆ ಹಾಕಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ವಿನಯ ಕೃಷ್ಣ ಪ್ರಸಾದ್, ಪುರಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಳೆದ ವರ್ಷ ಫೆಬ್ರವರಿ 13 ರಂದು ಇವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿತ್ತು. ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 13ರಂದು ಎರಡನೇ ಡೋಸ್ ಲಸಿಕೆ ಹಾಕಲಾಗಿತ್ತು. ನಂತರ ಅವರು ಹೊಸ ಆರೋಗ್ಯ ಕೇಂದ್ರವನ್ನು ಆಯ್ಕೆ ಮಾಡಿದ್ದು ಮೇ 19 ರಂದು ಮೂರನೇ ಡೋಸ್ ಪಡೆದಿದ್ದರು. ಆನಂತರ ಜೂನ್ 16, ಜುಲೈ 24, ಆಗಸ್ಟ್ 31, ಸೆಪ್ಟೆಂಬರ್ 11 ಮತ್ತು ಅದೇ ತಿಂಗಳ 22 ಮತ್ತು 24 ರಂದು ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಜನವರಿ ತಿಂಗಳ ಮೊದಲ ವಾರ 12 ನೇ ಬಾರಿ ಕೋವಿಡ್ ಲಸಿಕೆ ಪಡೆಯಲು ಬಂದಾಗ ಆರೋಗ್ಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು ಪರಿಶೀಲನೆ ನಡೆಸಿದಾಗ ಮುದುಕನ ಅಪರಾವತಾರ ತಿಳಿದುಬಂದಿದೆ.
ಬ್ರಹ್ಮದೇವ್, ಅಂಚೆ ಇಲಾಖೆಯಲ್ಲಿ ಕೆಲಸದಲ್ಲಿದ್ದು ನಿವೃತ್ತನಾಗಿದ್ದು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯದಿಂದಾಗಿ ಈ ರೀತಿ ಲಸಿಕೆ ಪಡೆಯುವಂತಾಗಿತ್ತು. ತನಗೆ ಆರೋಗ್ಯ ತೊಂದರೆ ಇದ್ದುದರಿಂದ ಪದೇ ಪದೇ ಲಸಿಕೆ ಪಡೆದಿದ್ದು ಸ್ವಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ.
84-year-old man, Brahamdev Mandal, a resident of the Puraini area of Madhepura district in Bihar who claims to have taken 11 doses of the coronavirus vaccine has been booked by Bihar Police.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm