ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm