ಬ್ರೇಕಿಂಗ್ ನ್ಯೂಸ್
17-09-20 11:20 am Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟಂಬರ್ 17: ಇಂದು ನಸುಕಿನಲ್ಲಿಯೇ ಭಾರತೀಯ ಯೋಧರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಬಟಾಮಲು ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್ಎಫ್ ಯೋಧರು ಉಗ್ರರ ಬೇಟೆ ಮಾಡಿದ್ದಾರೆ.
ಇಂದು ಮುಂಜಾನೆ 2.30ರ ಸುಮಾರಿಗೆ ಬಟಮಾಲೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಬಟಮಾಲೂನ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ಕಾರ್ಯಚರಣೆ ಇನ್ನೂ ನಡೆಯುತ್ತಿದೆ.
ಈ ವೇಳೆ ಭಾರತೀಯ ಸೈನಿಕರು ಭಯೋತ್ಪಾದಕರ ಅಡಗು ತಾಣದ ಬಳಿ ಹೋಗುತ್ತಿದಂತೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಎನ್ಕೌಂಟರ್ ಅಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಕಾರ್ಯಚರಣೆ ವೇಳೆ ಓರ್ವ ಮಹಿಳೆ ಕೂಡ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಯೋಧರಿಗೆ ಗಾಯಗೊಂಡಿದ್ದು, ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಕೂಡ ಪುಲ್ವಾಮದಲ್ಲಿ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸೆಪ್ಟೆಂಬರ್ 4ರಂದು ಬಾರಾಮುಲ್ಲಾ ಜಿಲ್ಲೆಯ ಯೆಡಿಪೋರಾ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಕೊಂದು ಹಾಕಿದ್ದವು. ಜೊತೆಗೆ ಭಯೋತ್ಪಾದಕರಿಂದ ಎರಡು ಎಕೆ-47 ರೈಫಲ್ಗಳು, ಎರಡು ಬುಲೆಟ್ ಜ್ಯಾಕೆಟ್ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.
ಜಮ್ಮು-ಕಾಸ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಬಳಿ ಪಾಕಿಸ್ತಾನ ಇಂದು ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ. ಈ ರೀತಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಉಗ್ರರು ಭಾರತದ ಒಳಗೆ ನುಸುಳಲು ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. 2014ರಿಂದ ಪಾಕಿಸ್ತಾನ ಮಾಡಿದ ದಾಳಿಗೆ ಭಾರತೀಯ ಸೇನೆಯ 75 ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.
Jammu and Kashmir: Three terrorists neutralised in encounter with security forces in Batamaloo area of Srinagar
— ANI (@ANI) September 17, 2020
(visuals deferred by unspecified time) pic.twitter.com/1vo56F3Luh
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm