ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm