ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm