ಬ್ರೇಕಿಂಗ್ ನ್ಯೂಸ್
18-09-20 04:16 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಗೂಗಲ್ ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆ್ಯಪ್ ದಿಢೀರ್ ಆಗಿ ಮಾಯವಾಗಿದೆ. ಪ್ಲೇ ಸ್ಟೋರ್ ನಿಂದ ಪೇಟಿಎಂ ತೆಗೆದು ಹಾಕಿದ್ದರ ಬಗ್ಗೆ ಗೂಗಲ್ ಅಧಿಕೃತವಾಗಿ ಯಾವುದೇ ಕಾರಣ ಕೊಟ್ಟಿಲ್ಲ.
ಪೇಟಿಎಂಗೆ ಭಾರತದಲ್ಲಿ ಲಕ್ಷಾಂತರ ಬಳಕೆದಾರರಿದ್ದಾರೆ. ಇದೀಗ ಆ್ಯಪ್ ಅನ್ನು ಗೂಗಲ್ ನಿಂದ ತೆಗೆದು ಹಾಕಿರುವುದು ಮುಂದೆ ನಿಷೇಧಕ್ಕೆ ಒಳಗಾಗಬಹುದೇ ಎನ್ನುವ ಅನುಮಾನ ಮೂಡಿದೆ. ಮೂಲಗಳ ಪ್ರಕಾರ, ಪೇಟಿಎಂ ಆ್ಯಪ್ ಆನ್ ಲೈನ್ ಜೂಜಿನ ಆಟಗಳಿಗೆ ಹೆಚ್ಚು ಬಳಕೆಯಾಗುತ್ತಿದೆ. ಗೂಗಲ್ ನ ಗ್ಯಾಂಬ್ಲಿಂಗ್ ಪಾಲಿಸಿಯನ್ನು ಉಲ್ಲಂಘಿಸಿದ್ದಕ್ಕಾಗಿ ಪೇಟಿಎಂ ಮೇಲೆ ತೂಗುಕತ್ತಿ ವಿಧಿಸಿದೆ ಎನ್ನಲಾಗ್ತಿದೆ.
ಆದರೆ, ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆಧರಿತ ಪೇಟಿಎಂ ಫೊರ್ ಬ್ಯುಸಿನೆಸ್, ಪೇಟಿಎಂ ಫೊರ್ ಮನಿ ಹಾಗು ಪೇಟಿಎಂಗೆ ಸಂಬಂಧಿಸಿದ ಇತರ ಆ್ಯಪ್ ಗಳು ಈಗಲೂ ಲಭ್ಯವಿದೆ. ಇನ್ನು ಆ್ಯಪಲ್ ಆ್ಯಪ್ ಸ್ಟೋರ್ ನಲ್ಲಿ ಸದ್ಯ ಪೇಟಿಎಂ ಲಭ್ಯವಿದೆ.

ಗೂಗಲ್ ಬ್ಲಾಗ್ ಸ್ಪಾಟ್ ನಲ್ಲಿರುವ ಮಾಹಿತಿ ಪ್ರಕಾರ, ಯಾವುದೇ ಆ್ಯಪ್ ಗೂಗಲ್ ನೀತಿಗಳನ್ನು ಉಲ್ಲಂಘಿಸಿದರೆ ಡೆವಲಪರ್ ಗಳಿಗೆ ಮಾಹಿತಿ ನೀಡಿ, ಆ್ಯಪನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕುತ್ತೇವೆ. ಬಳಿಕ ನಿಯಮ ಅನುಸರಿಸಿಕೊಂಡಲ್ಲಿ ಗೂಗಲ್ ಸ್ಟೋರ್ ನಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದಿದೆ. ಆದರೆ ಈ ಹೇಳಿಕೆಯಲ್ಲಿ ಪೇಟಿಎಮ್ ಆ್ಯಪ್ ಬಗ್ಗೆ ಗೂಗಲ್ ಯಾವುದೇ ರೀತಿಯ ಉಲ್ಲೇಖ ಮಾಡಿಲ್ಲ.
ಎರಡು ದಿನಗಳ ಹಿಂದಷ್ಟೇ ಭಾರತದ ಸಂಸತ್ತಿನಲ್ಲಿ ಆನ್ಲೈನ್ ಜೂಜುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಕೇಳಿಬಂದಿತ್ತು. ಆನ್ಲೈನ್ ರಮ್ಮಿಯಂತಹ ಆಟಗಳನ್ನು ನಿಷೇಧಿಸುವಂತೆ ಸಂಸದರು ಒತ್ತಾಯಿಸಿದ್ದರು. ಈ ಜೂಜಾಟಗಳಿಗೆ ಪೇಟಿಎಂ ಬಳಕೆ ಆಗುತ್ತಿದ್ದ ಬಗ್ಗೆ ಮಾಹಿತಿಗಳಿದ್ದವು.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm