ಬ್ರೇಕಿಂಗ್ ನ್ಯೂಸ್
18-09-20 05:34 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಚೀನಾ ಗೂಢಚರರು ಪ್ರಧಾನಿ ಮೋದಿ, ರಾಜನಾಥ್ ಸೇರಿದಂತೆ ದೇಶದ ವಿವಿಐಪಿಗಳ ಚಲನವಲನಗಳ ಬಗ್ಗೆ ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿಗಳ ನಡುವೆಯೇ ಈಗ ದೇಶದ ಮಹತ್ವದ ವಿಚಾರಗಳನ್ನು ಕಾಯ್ದಿಟ್ಟುಕೊಳ್ಳುವ ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ (ಎನ್ಐಸಿ) ಮೇಲೆ ಸೈಬರ್ ಅಟ್ಯಾಕ್ ಆಗಿದೆ. ಸೆಂಟರಿನ ಹಲವು ಕಂಪ್ಯೂಟರ್ ಗಳು ಹ್ಯಾಕ್ ಆಗಿದ್ದು, ಮಹತ್ವದ ವಿಚಾರಗಳನ್ನು ಕದಿಯಲಾಗಿದೆ ಎನ್ನುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ದೆಹಲಿ ಪೊಲೀಸರು ಸೈಬರ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಪ್ರಧಾನ ಮಂತ್ರಿ ಮತ್ತು ರಾಷ್ಟ್ರೀಯ ಭದ್ರತಾ ಕಾರ್ಯಾಲಯ ಸೇರಿದಂತೆ ಭದ್ರತೆಗೆ ಸಂಬಂಧಿಸಿದ ವಿಐಪಿಗಳ ಮಾಹಿತಿಗಳು ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ ನಲ್ಲಿ ಇರುತ್ತವೆ. ಇಂಥ ಕೇಂದ್ರಕ್ಕೆ ಸೈಬರ್ ಅಟ್ಯಾಕ್ ಆಗಿರುವುದು ದೇಶದ ಭದ್ರತೆ ವಿಚಾರದಲ್ಲಿ ತುಂಬ ಅಪಾಯಕಾರಿ ಎಂದು ರಾಷ್ಟ್ರೀಯ ಮಾಧ್ಯಮ ಡಿಎನ್ಎ ವರದಿ ಮಾಡಿದೆ. ಮಾಹಿತಿಗಳ ಪ್ರಕಾರ, ಈ ಸೈಬರ್ ಅಟ್ಯಾಕ್ ಇ-ಮೇಲ್ ಬೆಂಗಳೂರಿನಲ್ಲಿರುವ ಅಮೆರಿಕ ಮೂಲದ ಕಂಪನಿಯಿಂದ ಬಂದಿತ್ತು ಎನ್ನಲಾಗುತ್ತಿದೆ.
ಹ್ಯಾಕರ್ಸ್ ಎನ್ಐಸಿಗೆ ಕಳಿಸಿದ್ದ ಇ-ಮೇಲ್ ನಲ್ಲಿ ವೈರಸ್ ಇತ್ತು ಎನ್ನಲಾಗಿದೆ. ಇ-ಮೇಲ್ ಕ್ಲಿಕ್ ಮಾಡುತ್ತಿದ್ದಂತೆ ಕಂಪ್ಯೂಟರ್ ಗಳಲ್ಲಿದ್ದ ಡಾಟಾಗಳು ಸೋರಿಕೆಯಾಗಿವೆ. ಕೂಡಲೇ ವೈರಸ್ ಅಟ್ಯಾಕ್ ಆಗಿರುವುದನ್ನು ತಿಳಿದ ಎನ್ಐಸಿ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೆಹಲಿಯ ಸ್ಪೆಷಲ್ ಸೆಲ್ ಪೊಲೀಸ್ ಪಡೆ ತನಿಖೆ ಆರಂಭಿಸಿದ್ದಾರೆ. ಎನ್ಐಸಿ ಸಿಬಂದಿ ನೀಡಿರುವ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಬೆಂಗಳೂರಿನಲ್ಲಿರುವ ಅಮೆರಿಕನ್ ಮೂಲದ ಕಂಪನಿಯಿಂದ ಇ-ಮೇಲ್ ಬಂದಿರುವುದನ್ನು ಪತ್ತೆ ಮಾಡಿದ್ದಾರೆ. ಕಂಪನಿಯ ಐಪಿ ವಿಳಾಸ ಪತ್ತೆ ಮಾಡುತ್ತಿದ್ದಾರೆ. ಆದರೆ, ಇ-ಮೇಲ್ ಬೆಂಗಳೂರಿನಿಂದಲೇ ಹೋಗಿತ್ತೇ ಅಥವಾ ವಿದೇಶದಿಂದ ಬಂದಿತ್ತೇ ಅನ್ನುವುದು ದೃಢಪಟ್ಟಿಲ್ಲ.
ಇತ್ತೀಚೆಗಷ್ಟೇ ಕೇಂದ್ರ ಗುಪ್ತಚರ ಪಡೆ ಅಧಿಕಾರಿಗಳು ಸೈಬರ್ ಅಟ್ಯಾಕ್ ಆಗುವ ಬಗ್ಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸರಕಾರಿ ಮತ್ತು ಖಾಸಗಿ ಕಂಪನಿಗಳು ಮುಂಜಾಗ್ರತೆ ವಹಿಸಬೇಕೆಂದು ಎಚ್ಚರಿಕೆ ನೀಡಿತ್ತು.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm