ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm