ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm