ಬ್ರೇಕಿಂಗ್ ನ್ಯೂಸ್
28-02-22 06:50 pm HK Desk news ದೇಶ - ವಿದೇಶ
ನವದೆಹಲಿ, ಫೆ 28: ರಷ್ಯಾ ನಡೆಸಿದ ಬಾಂಬ್ ಹಾಗೂ ಶೆಲ್ ದಾಳಿಯಿಂದಾಗಿ ಉಕ್ರೇನ್ನಲ್ಲಿ ಕನಿಷ್ಠ 16 ಮಕ್ಕಳು ಸಾವನ್ನಪ್ಪಿದ್ದಾರೆ. ನಾಗರಿಕರ ಸಾವು-ನೋವು ಅಪಾರವಾಗಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರಿ ಡಾ. ಇಗೊರ್ ಪೊಲಿಖಾ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಸಮಯದಲ್ಲಿ ನಮ್ಮ ದೇಶದ 16 ಮಕ್ಕಳು ಸಾವನ್ನಪ್ಪಿದ್ದಾರೆ. ವಿವಿಧ ದೇಶಗಳ ನಿರ್ಬಂಧಗಳಿಂದಾಗಿ ರಷ್ಯಾದ ಆರ್ಥಿಕತೆಯು ಪ್ರತಿದಿನವೂ ದುರ್ಬಲಗೊಳ್ಳುತ್ತಿದೆ. ಇದುವರೆಗೆ ಸುಮಾರು 5,300 ರಷ್ಯಾದ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಷ್ಯಾದ ವಿಮಾನಗಳಿಗಾಗಿ ಯುರೋಪಿನ ವಾಯುಪ್ರದೇಶವನ್ನು ಭಾನುವಾರ ಮುಚ್ಚಲಾಗಿದೆ. ಆ ದೇಶದ ಆರ್ಥಿಕತೆಯು ಪ್ರತಿದಿನ ದುರ್ಬಲಗೊಳ್ಳುತ್ತಿದೆ. ರಷ್ಯಾವು ಸಂಪೂರ್ಣವಾಗಿ ಸಾವುನೋವುಗಳನ್ನು ಎದುರಿಸುತ್ತಿದೆ. ಸರಿಸುಮಾರು 5,300 ರಷ್ಯಾದ ಸೈನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಎಲ್ಲಾ ವಿದೇಶಿ ಪಾಲುದಾರ ರಾಷ್ಟ್ರಗಳು ಯುದ್ಧ ನಿಲ್ಲಿಸಲು ವ್ಲಾಡಿಮಿರ್ ಪುಟಿನ್ ಮೇಲೆ ಒತ್ತಡ ಹೇರಬೇಕು ಎಂದು ಇದೇ ವೇಳೆ ಉಕ್ರೇನ್ ರಾಯಭಾರಿ ವಿನಂತಿಸಿದ್ದಾರೆ.

ಶಾಂತಿ ಮಾತುಕತೆಯ ಸಮಯದಲ್ಲೂ ದಾಳಿ ಆರೋಪ;
ಯುದ್ಧವನ್ನು ನಿಲ್ಲಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಒತ್ತಡ ಹೇರಲು ನಾವು ನಮ್ಮ ಎಲ್ಲಾ ಪಾಲುದಾರ ದೇಶಗಳನ್ನು ಕೇಳಿಕೊಳ್ಳುತ್ತಿದ್ದೇವೆ. ಇಂದು, ನಮ್ಮ ನಿಯೋಗವು ಮೊದಲ ಸುತ್ತಿನ ಶಾಂತಿ ಮಾತುಕತೆ ನಡೆಸಲು ಹೋಗಿದೆ. ಶಾಂತಿ ಮಾತುಕತೆಯ ಸಮಯದಲ್ಲಿಯೂ ನಿರಂತರ ಶೆಲ್ ದಾಳಿ, ಬಾಂಬ್ ದಾಳಿ ನಡೆಯುತ್ತಿವೆ ಎಂದು ಅಸಹಾಯಕತೆಯನ್ನು ತೋಡಿಕೊಂಡರು.

ಉಕ್ರೇನಿಯನ್ ನಿರಾಶ್ರಿತರ ಸಂಖ್ಯೆ 4 ಲಕ್ಷವನ್ನು ಮೀರಿದೆ. ಯುದ್ಧವನ್ನು ನಿಲ್ಲಿಸದಿದ್ದರೆ ಈ ಸಂಖ್ಯೆ 7 ಮಿಲಿಯನ್ ದಾಟಬಹುದು. ಗಡಿಯಲ್ಲಿ ಬಹಳ ಉದ್ದವಾದ ಸರತಿ ಸಾಲುಗಳಲ್ಲಿ ಉಕ್ರೇನ್ ಜನ ನಿಂತಿದ್ದು, ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಇಗೊರ್ ಪೊಲಿಖಾ, ಭಾರತೀಯ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.
At least 16 children have died in Ukraine due to Russian bombing and shelling. The death toll of civilians is immense, said Ukraine's Ambassador to India Dr. Said Igor Polikha.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm