ಬ್ರೇಕಿಂಗ್ ನ್ಯೂಸ್
08-03-22 08:05 pm HK news Desk ದೇಶ - ವಿದೇಶ
ನವದೆಹಲಿ, ಮಾ.8 : 1999ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಭಾರತದಲ್ಲಿ ಬಂಧಿಯಾಗಿದ್ದ ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿಕೊಂಡಿದ್ದ ಜೈಶ್ ಉಗ್ರರ ಪೈಕಿ ಒಬ್ಬನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್ ಜಾಹಿದ್ ಅಖುಂಡ್ ಎಂಬಾತನನ್ನು ಪಾಕಿಸ್ತಾನದ ಕರಾಚಿಯಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದಾರೆ.
ಜಹೂರ್ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಜೊತೆ ಗುರುತಿಸಿಕೊಂಡಿದ್ದ. ಇಬ್ಬರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ.
1999ರಲ್ಲಿ ಐಸಿ-814 ವಿಮಾನದಲ್ಲಿದ್ದ 176 ಪ್ರಯಾಣಿಕರನ್ನು ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣಕ್ಕೆ ಒಯ್ದಿದ್ದ ಅಪಹರಣಕಾರರು ಏಳು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿದ್ದರು. ವಿಮಾನವು ಕಾಠ್ಮಂಡುವಿನಿಂದ ಹೊರಟು ದೆಹಲಿಗೆ ಬರುತ್ತಿದ್ದಾಗ ಉಗ್ರರು ನುಸುಳಿಕೊಂಡು ಅಪಹರಿಸಿದ್ದು ನೇರವಾಗಿ ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು.
ಭಾರತದ ಜೈಲಿನಲ್ಲಿ ಬಂಧಿಯಾಗಿದ್ದ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಅಲ್ ಉಮರ್ ಮುಜಾಹಿದ್ದೀನ್, ಮುಷ್ತಾಕ್ ಅಹ್ಮದ್ ಜರ್ಗರ್ ಮತ್ತು ಬ್ರಿಟಿಷ್ ಮೂಲದ ಅಲ್-ಖೈದಾ ನಾಯಕ ಅಹ್ಮದ್ ಒಮರ್ ಸಯೀದ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು ಅಪಹರಣ ಮಾಡಲಾಗಿತ್ತು. ಬಳಿಕ ಉಗ್ರರನ್ನು ಬಿಡುಗಡೆಗೊಳಿಸಿ ಅಮಾಯಕ ಜನರನ್ನು ಮರಳಿ ಅದೇ ವಿಮಾನದಲ್ಲಿ ಕರೆತರಲಾಗಿತ್ತು.
zahoor mistry alias zahid akund, one of the terrorists who hijacked air india flight ic-814 in 1999, was shot dead by two bike-riding men in karachi, pakistan.zahoor identified with the terrorist group jaish-e-mohammad. two attackers opened fire and were caught on cctv camera. the identity was not ascertained as he was wearing a mask on his face.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm