ಬ್ರೇಕಿಂಗ್ ನ್ಯೂಸ್
10-03-22 05:32 pm HK Desk news ದೇಶ - ವಿದೇಶ
ಚಂಡೀಗಢ, ಮಾ 10: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, "ಎಎಪಿ ದೇಶದ ರಾಜಕೀಯವನ್ನು ಬದಲಾಯಿಸಿದೆ," ಎಂದು ಹೇಳಿದರು.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಉಲ್ಲೇಖವನ್ನು ಮಾಡಿದ್ದಾರೆ. "ಸ್ವಾತಂತ್ರ್ಯದ ನಂತರ ವ್ಯವಸ್ಥೆಯು ಬದಲಾಗದಿದ್ದರೆ ಏನೂ ಬದಲಾಗುವುದಿಲ್ಲ," ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅವರು ಏನನ್ನೂ ಬದಲಾಯಿಸಲಿಲ್ಲ," ಎಂದು ವಿಪಕ್ಷಗಳ ವಿರುದ್ಧ ಟೀಕೆ ಮಾಡಿದ ಅರವಿಂದ್ ಕೇಜ್ರಿವಾಲ್, "ಎಎಪಿ ದೇಶದ ರಾಜಕೀಯವನ್ನು ಬದಲಾಯಿಸಿದೆ," ಎಂದು ಹೇಳಿದರು. "ನಾವು ವ್ಯವಸ್ಥೆಯನ್ನು ಬದಲಾಯಿಸಿದ್ದೇವೆ, ನಾವು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ನಿರ್ಮಾಣ ಮಾಡಿದ್ದೇವೆ," ಎಂದು ಅರವಿಂದ್ ಕೇಜ್ರಿವಾಲ್ ಉಲ್ಲೇಖ ಮಾಡಿದರು.
ನಾನು ಪಂಜಾಬ್ ಮುಖ್ಯಮಂತ್ರಿ ಆಗಲಿರುವ ನನ್ನ ಸಹೋದರ ಭಗವಂತ್ ಮಾನ್ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಆಪ್ 90ಕ್ಕೂ ಅಧಿಕ ಸ್ಥಾನವನ್ನು ದಾಟಿದೆ. ಫಲಿತಾಂಶಗಳು ಇನ್ನೂ ಕೂಡಾ ಬರುತ್ತಿದೆ. ಜನರು ನಮ್ಮ ಮೇಲೆ ಅಪಾರ ನಂಬಿಕೆಯನ್ನು ಇರಿಸಿದ್ದಾರೆ. ನಾವು ಆ ನಂಬಿಕೆಗೆ ದಕ್ಕೆ ಉಂಟು ಮಾಡುವುದಿಲ್ಲ. ನಾವು ಈ ದೇಶದ ರಾಜಕೀಯವನ್ನು ಬದಲಾವಣೆ ಮಾಡುತ್ತೇವೆ," ಎಂದು ತಿಳಿಸಿದರು.
ಇನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರುವಂತೆ ಕೇಜ್ರಿವಾಲ್ ಪಂಜಾಬ್ ಜನತೆಗೆ ಮನವಿ ಮಾಡಿದರು. "ನಾನು ಪಂಜಾಬ್ನ ಜನರನ್ನು ಎಎಪಿಗೆ ಸೇರಲು ಮನವಿ ಮಾಡಲು ಬಯಸುತ್ತೇನೆ. ಕೆಲವೊಮ್ಮೆ ಜನರು ಏನು ಮಾಡಬಹುದು ಎಂದು ಯೋಚಿಸುತ್ತಾರೆ. ಅವರು ಸಾಮಾನ್ಯ ಜನರು. ಆದರೆ ನಾನು ಜನರನ್ನು ಕೇಳಲು ಬಯಸುತ್ತೇನೆ. ಚನ್ನಿಯನ್ನು ಸೋಲಿಸಿದವರು ಯಾರು?," ಎಂದು ಪ್ರಶ್ನೆ ಮಾಡಿದರು.
Delhi Chief Minister and Aam Aadmi Party (AAP) national convenor Arvind Kejriwal on Thursday termed the massive victory of his party in Punjab as 'Inquilab'.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am