ಬ್ರೇಕಿಂಗ್ ನ್ಯೂಸ್
11-03-22 03:15 pm HK Desk news ದೇಶ - ವಿದೇಶ
ಲಕ್ನೋ, ಮಾ.11 : ಉತ್ತರ ಪ್ರದೇಶ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗಳಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಈ ಫಲಿತಾಂಶದಿಂದ ಕಾರ್ಯಕರ್ತರು ಕುಗ್ಗುವುದು ಬೇಡ. ನಾವು ಮುಂದಿನ ದಿನಗಳಲ್ಲಿ ಮತ್ತೆ ತಿರುಗಿ ಬೀಳಲಿದ್ದೇವೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿರುವ ಮಾಯಾವತಿ, ನಾವು ನಿರೀಕ್ಷೆ ಮಾಡದ ರೀತಿ ಫಲಿತಾಂಶ ಬಂದಿದೆ. ಹಾಗೆಂದು ನಾವು ಇದರಿಂದ ಧೃತಿಗೆಡಬಾರದು. ನಾವು ಈ ಫಲಿತಾಂಶದಿಂದ ಪಾಠ ಕಲಿಯಬೇಕು. ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆಗೆ ಮತ್ತಷ್ಟು ಪ್ರಯತ್ನ ಪಡಬೇಕು. ಮುಂದೆ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಪಕ್ಷವು ಕಠಿಣ ದಿನಗಳನ್ನು ಎದುರಿಸುತ್ತಿದೆ. ಹಿಂದೆ ಬಿಜೆಪಿ ಕೂಡ ಕಠಿಣ ಪರಿಸ್ಥಿತಿಯಲ್ಲೇ ಇತ್ತು. ಆದರೆ ಹಂತ ಹಂತವಾಗಿ ಮೇಲೆದ್ದು ಬಂದಿದೆ. 2017ರ ಮೊದಲು ಬಿಜೆಪಿಗೂ ಉತ್ತಮ ಸ್ಥಿತಿ ಇರಲಿಲ್ಲ. ಬಿಜೆಪಿಗೆ ಆಗ ಯಾವ ಸ್ಥಿತಿಯಿತ್ತೋ ಅದೇ ಸ್ಥಿತಿ ಈಗ ಕಾಂಗ್ರೆಸಿನದ್ದಾಗಿದೆ. ಉತ್ತರ ಪ್ರದೇಶದ ಫಲಿತಾಂಶ ನಮಗೆಲ್ಲ ಪಾಠ ಆಗಬೇಕು. ಹೇಗೆ ಸವಾಲನ್ನು ಸ್ವೀಕರಿಸಿ ಮುಂದೆ ಬರಬೇಕು ಅನ್ನುವುದನ್ನು ಕಲಿಯಬೇಕು ಎಂದು ಮಾಯಾವತಿ ಸಲಹೆ ಮಾಡಿದ್ದಾರೆ.
ನಮ್ಮ ಬಗ್ಗೆ ವಿರೋಧ ಪಕ್ಷಗಳು ನೆಗೆಟಿವ್ ಕ್ಯಾಂಪೇನ್ ಮಾಡಿದ್ದು ಮುಳುವಾಯ್ತು ಎಂದು ಹೇಳಿದ ಮಾಯಾವತಿ, ಬಿಎಸ್ಪಿ ಎಂದರೆ ಬಿಜೆಪಿಯ ಬೀ ಟೀಮ್ ಎಂದು ಅಪಪ್ರಚಾರ ನಡೆಸಿದರು. ಆದರೆ ಸತ್ಯ ತದ್ವಿರುದ್ಧವಾಗಿತ್ತು. ಬಿಜೆಪಿ ಮತ್ತು ಬಿಎಸ್ಪಿ ನಡುವಿನ ಹೋರಾಟ ಕೇವಲ ರಾಜಕೀಯವಾಗಿ ಮಾತ್ರ ಅಲ್ಲ. ಸೈದ್ಧಾಂತಿಕವಾಗಿ ಅಷ್ಟೇ ಮುಖ್ಯ. ಜನರು ಬಿಎಸ್ಪಿಯನ್ನು ದೂರವಿಡಲು ಬಿಜೆಪಿ ಮತ ಕೊಟ್ಟಿದ್ದಾರೆ. ಬಿಎಸ್ಪಿ ಪಕ್ಷದ ಬಗ್ಗೆ ವಿರೋಧದಿಂದಾಗಿ ಬಿಜೆಪಿಗೆ ಓಟು ಕೊಟ್ಟಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಮತ ನೀಡಿದ್ದಾರೆ. ಆದರೆ ರಾಜಕಾರಣದಲ್ಲಿ ಸೋಲು- ಗೆಲುವು ಸಹಜ. ಪಕ್ಷದ ನಾಯಕರು ಸಂದರ್ಭಕ್ಕೆ ತಕ್ಕಂತೆ ಒಗ್ಗಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಬೇಕಿದೆ ಎಂದು ಮಾಯಾವತಿ ಹೇಳಿದ್ದಾರೆ.
The Bahujan Samaj Party managed to win only one of the 403 assembly seats in Uttar Pradesh. Following the party’s dismal performance in the UP polls, BSP chief Mayawati urged party workers to not feel discouraged and promised a comeback in the future.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm