ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am