ಬ್ರೇಕಿಂಗ್ ನ್ಯೂಸ್
16-03-22 02:12 pm HK Desk news ದೇಶ - ವಿದೇಶ
ನವದೆಹಲಿ, ಮಾ.16 : ಪಂಚ ರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಯಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಿಗೆ ರಾಜಿನಾಮೆ ನೀಡಲು ಸೂಚಿಸಿದ ಬೆನ್ನಲ್ಲೇ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜಿನಾಮೆ ನೀಡಿದ್ದಾರೆ.
ಇತ್ತೀಚೆಗೆ ಚುನಾವಣೆ ನಡೆದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ, ಗೋವಾ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ನೀಡಿರುವುದನ್ನು ಎಐಸಿಸಿ ಜನರಲ್ ಸೆಕ್ರಟರಿ ರಣದೀಪ್ ಸುರ್ಜೇವಾಲಾ ತಮ್ಮ ಟ್ವಿಟರ್ ನಲ್ಲಿ ಹಾಕ್ಕೊಂಡಿದ್ದರು. ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷರ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ ಎಂಬ ಬಗ್ಗೆ ಹಿರಿಯ ನಾಯಕ ಕಪಿಲ್ ಸಿಬಲ್ ಟೀಕಿಸಿದ ಒಂದೇ ದಿನದಲ್ಲಿ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಂಜಾಬ್ ನಲ್ಲಿ ಚರಣ್ ಜಿತ್ ಚನ್ನಿಯನ್ನು ಸಿಎಂ ಮಾಡಿದ್ದು ಹೇಗೆ, ಅವರನ್ನು ಸಿಎಂ ಎಂದು ಘೋಷಿಸಲು ರಾಹುಲ್ ಗಾಂಧಿಗೆ ಯಾವ ಅಧಿಕಾರ ಇತ್ತು ಎಂದು ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದರು. ಕಳೆದ ಜುಲೈ ತಿಂಗಳಲ್ಲಿ ಪಂಜಾಬ್ ಸಿಎಂ ಆಗಿದ್ದ ಅಮರಿಂದರ್ ಸಿಂಗ್ ಅವರನ್ನು ಬದಲಿಸಿ, ನವಜೋತ್ ಸಿಂಗ್ ಸಿಧು ಸೂಚನೆಯಂತೆ ಚರಣಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಮಾಡಲಾಗಿತ್ತು. ಅಲ್ಲದೆ, ಚನ್ನಿ ಮತ್ತು ಸಿಧು ನೇತೃತ್ವದಲ್ಲಿ ಪಂಜಾಬ್ ನಲ್ಲಿ ಚುನಾವಣೆ ಎದುರಿಸಲಾಗಿತ್ತು. ಚುನಾವಣೆಯಲ್ಲಿ ಭಾರೀ ಸೋಲು ಅನುಭವಿಸಿದ್ದರಿಂದ ಕಾಂಗ್ರೆಸ್ ನಾಯಕರಿಂದಲೇ ಈ ಬಗ್ಗೆ ಟೀಕೆ ವ್ಯಕ್ತವಾಗಿತ್ತು.
ಇದೀಗ ಪಂಚ ರಾಜ್ಯಗಳ ಕಾಂಗ್ರೆಸ್ ಘಟಕಗಳ ಅಧ್ಯಕ್ಷರನ್ನು ರಾಜಿನಾಮೆ ನೀಡಲು ಸೂಚಿಸಿದ್ದು, ಅಲ್ಲಿ ಪಕ್ಷವನ್ನು ಪುನರ್ ಸಂಘಟಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಉತ್ತರಾಖಂಡ, ಗೋವಾ ಘಟಕಗಳ ಅಧ್ಯಕ್ಷರು ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅಲ್ಲಿ ಹೊಸತಾಗಿ ಕಾಂಗ್ರೆಸ್ ಘಟಕ ರಚನೆಯಾಗಲಿದೆ.
Congress president Sonia Gandhi has asked presidents of five state units of the party to resign. The direction comes days after the party fared poorly in elections to the assemblies of these five states.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm