ಬ್ರೇಕಿಂಗ್ ನ್ಯೂಸ್
17-03-22 05:42 pm HK Desk news ದೇಶ - ವಿದೇಶ
ನವದೆಹಲಿ, ಮಾ.17: ರೈಲ್ವೇ ಬಜೆಟ್ ನಲ್ಲಿ ಕೇಂದ್ರ ಸರಕಾರವು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ತಾರತಮ್ಯ ನಡೆ ತೋರಿದೆ ಎಂದು ಡಿಎಂಕೆ ಸಂಸದೆ ಕನಿಮೋಳಿ ಆಕ್ಷೇಪಿಸಿದ್ದಾರೆ. ಪ್ರಸಕ್ತ ಸಾಲಿನ ರೈಲ್ವೇ ಬಜೆಟ್ ನಲ್ಲಿ ಹೊಸ ರೈಲ್ವೇ ಮಾರ್ಗಗಳನ್ನು ನಿರ್ಮಿಸಲು ದಕ್ಷಿಣ ರೈಲ್ವೇಗೆ ಕೇವಲ 59 ಕೋಟಿ ಮೀಸಲಿರಿಸಿದ್ದರೆ, ಉತ್ತರ ರೈಲ್ವೇಗೆ 13 ಸಾವಿರ ಕೋಟಿ ಕೊಟ್ಟಿದ್ದಾರೆ. ಈ ಮೂಲಕ ನೀವು ತಾರತಮ್ಯ ಧೋರಣೆ ತೋರುತ್ತಿದ್ದೀರಿ ಎಂದು ರೈಲ್ವೇ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೇಂದ್ರ ಸರಕಾರದ ಬಜೆಟ್ ನಲ್ಲಿ ಈ ರೀತಿಯ ತಾರತಮ್ಯ ಏಕೆ ಎಂದು ರೈಲ್ವೇ ಸಚಿವರನ್ನು ಸಂಸದೆ ಕನಿಮೋಳಿ ಪ್ರಶ್ನೆ ಮಾಡಿದ್ದಾರೆ. ಏಕ್ ಭಾರತ್ ಅನ್ನುವುದನ್ನು ನೀವು ಭಾಷಣದಲ್ಲಿ ಆಗಾಗ ಪ್ರಸ್ತಾಪಿಸುವುದನ್ನು ಕೇಳಿದ್ದೇನೆ. ಏಕ್ ಭಾರತ್ ಅನ್ನೋದರಲ್ಲಿ ದಕ್ಷಿಣ ಭಾರತ ಬರೋದಿಲ್ಲವೇ.. ಹಾಗಿದ್ದರೆ ಈ ರೀತಿಯ ತಾರತಮ್ಯ ಏಕೆ ಎಂದು ಸಚಿವರನ್ನು ಪ್ರಶ್ನೆ ಮಾಡಿದ್ದಾರೆ.
ರೈಲ್ವೇ ಇಲಾಖೆಯಲ್ಲಿ ಸಾವಿರಾರು ಉದ್ಯೋಗ ಭರ್ತಿ ಆಗಿಲ್ಲ. ಅದನ್ನು ಭರ್ತಿಗೊಳಿಸುವಲ್ಲಿಯೂ ದಕ್ಷಿಣ ಭಾರತೀಯರಿಗೆ ಕೆಲಸ ಲಭಿಸುತ್ತಿಲ್ಲ. ನೀವು ದಕ್ಷಿಣ ಭಾರತೀಯರನ್ನು ಉದ್ಯೋಗದಿಂದ ದೂರವಿಡಲು ಬಯಸುತ್ತಿದ್ದೀರಾ.. ಮುಂದಿನ ವರ್ಷದಲ್ಲಿ ನೂರು ಶೇಕಡಾ ವಿದ್ಯುದೀಕರಣ ಈಡೇರಿಸುವ ವಾಗ್ದಾನ ನೀಡಿದ್ದೀರಿ. ಇದು ಹೇಗೆ ಸಾಧ್ಯ ಎನ್ನುವುದನ್ನು ಮನವರಿಕೆ ಮಾಡಬೇಕು ಎಂದು ಕನಿಮೋಳಿ ಆಗ್ರಹ ಮಾಡಿದ್ದಾರೆ.
ಕೇಂದ್ರ ಸರಕಾರವು ದಕ್ಷಿಣವನ್ನು ಹೇಗೆ ನಡೆಸಿಕೊಳ್ಳುತ್ತಿದೆ ಅನ್ನುವುದಕ್ಕೆ ಇದು ಉದಾಹರಣೆ ಎಂದು ಆಕ್ಷೇಪಿಸಿರುವ ಕನಿಮೋಳಿ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಲೋಕಸಭೆಯಲ್ಲಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹಿಂದಿಯಲ್ಲಿ ಉತ್ತರಿಸಲು ಯತ್ನಿಸಿದಾಗ, ಇಂಗ್ಲಿಷ್ ನಲ್ಲಿಯೇ ಉತ್ತರಿಸುವಂತೆ ಕನಿಮೋಳಿ ಕೇಳಿಕೊಂಡಿರುವ ವಿಡಿಯೋ ಕೂಡ ವೈರಲ್ ಆಗಿದೆ.
ஒன்றிய ரயில்வே துறை நிதி ஒதுக்கீட்டில், தெற்குப் பகுதிக்கும், வடக்குப் பகுதிக்கும் காட்டும் பாரபட்சத்தை சுட்டிக்காட்டி, ரயில்வே பட்ஜெட்டில் இருக்கும் குறைகள் குறித்தும், ரயில்வே துறையின் செயல்பாடுகள் குறித்தும் இன்று நாடாளுமன்றத்தில் பேசிய போது (1/2) pic.twitter.com/yAp68sZT7k
— Kanimozhi (கனிமொழி) (@KanimozhiDMK) March 15, 2022
A video of Tamil Nadu MP Kanimozhi criticising the union government for 'meagre' allocation of funds for South India has gone viral. During the debate on Budget 2022, Kanimozhi said only Rs 59 crore is earmarked for building new railway lines for the Southern Railway in the Union Budget 2022.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm