ಬ್ರೇಕಿಂಗ್ ನ್ಯೂಸ್
24-03-22 02:00 pm HK Desk news ದೇಶ - ವಿದೇಶ
ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm