ಬ್ರೇಕಿಂಗ್ ನ್ಯೂಸ್
22-09-20 05:56 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆಪ್ಟಂಬರ್ 22: ‘ತಾಯಿಯ ಅಂಗಾಂಗಗಳು ಮಾರಾಟಕ್ಕಿವೆ. ಮಕ್ಕಳ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನೂ ಮಾರಾಟ ಮಾಡುತ್ತೇನೆ’ ಹೀಗೆ ಬಡ ತಾಯಿಯೊಬ್ಬಳು ತನ್ನ ಮಕ್ಕಳ ಚಿಕಿತ್ಸೆಗಾಗಿ ಬೋರ್ಡ್ ಹಿಡಿದು ನಿಂತ ಹೃದಯ ಕಲಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.
ಶಾಂತಿ ಎಂಬ ಮಧ್ಯವಯಸ್ಕ ಮಹಿಳೆಯೊಬ್ಬರು ತನ್ನ ಬೆಳೆದು ನಿಂತ ಮಕ್ಕಳ ಜೊತೆ ರಸ್ತೆ ಬದಿಯಲ್ಲಿ ಭಿತ್ತಿಪತ್ರ ಹಿಡಿದು ನಿಂತಿದ್ದರು. ಮಲಪ್ಪುರಂ ಜಿಲ್ಲೆಯ ನಿವಾಸಿಯಾಗಿರುವ ಈ ಮಹಿಳೆ ತನ್ನ ಐವರು ಮಕ್ಕಳೊಂದಿಗೆ ಕೊಚ್ಚಿಯಲ್ಲಿ ನೆಲೆಸಿದ್ದಾರೆ. ಮಕ್ಕಳಿಗೆ ಹುಷಾರಿಲ್ಲ. ಅವರ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನು ಮಾರಲು ನಿರ್ಧರಿಸಿದ್ದಾಗಿ ಎಂದು ಬರೆದಿದ್ದಾರೆ.
ತಂದೆಯಿಲ್ಲದ ಈ ಕುಟುಂಬದ ಹೊಣೆ ಹೊತ್ತಿದ್ದ ಹಿರಿಯ ಮಗ 25 ವರ್ಷದ ರಾಜೇಶ್, ಇತ್ತೀಚೆಗೆ ಅಪಘಾತಕ್ಕೀಡಾಗಿದ್ದು ಮೆದುಳಿನ ಸರ್ಜರಿಗೆ ಒಳಗಾಗಿದ್ದಾನೆ. ಇನ್ನು 2ನೇ ಮಗ ರಂಜಿತ್ ಹೊಟ್ಟೆಯಲ್ಲಿ ಟ್ಯೂಮರ್ ಆಗಿದ್ದು, ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾನೆ. ಇನ್ನು ಮೂರನೇ ಮಗ 21 ವರ್ಷದ ಸಜಿತ್, ಥಿಯೇಟರಲ್ಲಿ ಕೆಲಸ ಮಾಡುತ್ತಿದ್ದು ಕೊರೊನಾದಿಂದಾಗಿ ಕೆಲಸ ಕಳಕೊಂಡಿದ್ದಾನೆ. ಇನ್ನು 11 ವರ್ಷದ ಮಗಳಿದ್ದು ರಸ್ತೆ ಅಪಘಾತದಿಂದಾಗಿ ನರದ ಸರ್ಜರಿಗೆ ಒಳಗಾಗಬೇಕೆಂದು ವೈದ್ಯರು ತಿಳಿಸಿದ್ದಾರೆ. ಇನ್ನೊಂದು ಸಣ್ಣ ಮಗುವಿದ್ದು, ಶಾಲೆಗೆ ಹೋಗುತ್ತಿದೆ. ಹೀಗಾಗಿ ಬದುಕು ಸಾಗಿಸಲು ಸಾಧ್ಯವಾಗದೆ ಈ ಕೆಲಸಕ್ಕೆ ಮುಂದಾಗಿದ್ದಾಗಿ ಶಾಂತಿ ಹೇಳುತ್ತಾರೆ.
ಮಹಿಳೆ ಭಿತ್ತಿಪತ್ರ ಹಿಡಿದು ರಸ್ತೆಯಲ್ಲಿ ನಿಲ್ಲುತ್ತಿದ್ದಂತೆ ಎಚ್ಚತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತ ಮಹಿಳೆಗೆ ಸಹಾಯ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಶಾಂತಿ, ನಾವು ಹಲವು ದಿನಗಳಿಂದ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ಮೋಟರ್ ಡ್ರೈವಿಂಗ್ ಕಲಿಸಲು ಹೋಗುತ್ತಿದೆ. ಕೊರೊನಾದಿಂದಾಗಿ ಕೆಲಸವನ್ನೂ ಕಳಕೊಂಡಿದ್ದೇನೆ. ಸದ್ಯ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗದ ಸ್ಥಿತಿ ಇದೆ. ನನ್ನ ಮೂವರು ಮಕ್ಕಳಿಗೆ ಆರೋಗ್ಯ ತೊಂದರೆಗಳಿದ್ದು, ಕೆಲಸ ಮಾಡಲು ಆಗುತ್ತಿಲ್ಲ. ಈಗಾಗಲೇ 20 ಲಕ್ಷ ರೂ. ನಷ್ಟು ಸಾಲ ಮಾಡಿದ್ದೇನೆ. ನಮಗೆ ಹಣದ ಮೂಲ ಯಾವುದೂ ಇಲ್ಲ. ಹೀಗಾಗಿ ಜೀವನ ಕಷ್ಟವಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.ತನ್ನ ಕಿರಿಯ ಮಗುವನ್ನು ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಪತಿ ಬಿಟ್ಟು ಹೋಗಿದ್ದಾರೆ.
ಮಹಿಳೆ ಬೀದಿಗೆ ಬಂದಿರುವ ವಿಚಾರ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಜಿಲ್ಲಾಡಳಿತ ಕುಟುಂಬವನ್ನು ಆಶ್ರಯ ಮನೆಯೊಂದಕ್ಕೆ ಸ್ಥಳಾಂತರಿಸಿದೆ. ಅಲ್ಲದೆ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm