ಬ್ರೇಕಿಂಗ್ ನ್ಯೂಸ್
02-04-22 12:29 pm HK Desk news ದೇಶ - ವಿದೇಶ
ಕೊಲಂಬೋ, ಎ.2: ಶ್ರೀಲಂಕಾದಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬಂದಿರುವುದರಿಂದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರು ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಹಣದುಬ್ಬರದಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಊಟಕ್ಕೂ ತತ್ವಾರ ಎದುರಾಗಿರುವುದರಿಂದ ಜನರು ಸಾವಿರಾರು ಸಂಖ್ಯೆಯಲ್ಲಿ ಶುಕ್ರವಾರ ಅಧ್ಯಕ್ಷ ರಾಜಪಕ್ಸ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಸಾರಿಗೆ ವಾಹನಗಳು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿ ತೀವ್ರ ಹಿಂಸಾಚಾರದಲ್ಲಿ ತೊಡಗಿದ್ದಾರೆ. ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರಾಜಧಾನಿ ಕೊಲಂಬೋದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ದೇಶಾದ್ಯಂತ ಜನರು ರೊಚ್ಚಿಗೇಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷೆ ದೃಷ್ಟಿಯಿಂದ ಎಮರ್ಜೆನ್ಸಿ ಘೋಷಿಸಲಾಗಿದೆ. ಜನರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ದೃಷ್ಟಿಯಿಂದ ಮಿಲಿಟರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಮರ್ಜೆನ್ಸಿ ಘೋಷಣೆಯ ಬೆನ್ನಲ್ಲೇ ಅಧ್ಯಕಅಷ ರಾಜಪಕ್ಸ ಹೇಳಿದ್ದಾರೆ. ದೇಶಾದ್ಯಂತ ಅಗತ್ಯ ವಸ್ತುಗಳ ಕೊರತೆ ಎದುರಾಗಿದ್ದು, ಜನರು ತರಕಾರಿ, ಅಕ್ಕಿ ಪಡೆಯುವುದಕ್ಕಾಗಿ ಹೈರಾಣು ಅನುಭವಿಸುತ್ತಿದ್ದಾರೆ. ಅಂಗಡಿಗಳಲ್ಲಿ ಜೀವನಾವಶ್ಯಕ ವಸ್ತುಗಳೇ ಇಲ್ಲವಾಗಿದ್ದು, ದುಬಾರಿ ದರ ಉಂಟಾಗಿದೆ.
1948ರಲ್ಲಿ ಬ್ರಿಟನ್ ಕೈಯಿಂದ ಸ್ವಾತಂತ್ರ್ಯ ಪಡೆದ ಬಳಿಕ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುಸ್ಥಿತಿ ಉಂಟಾಗಿದೆ. ಶುಕ್ರವಾರ ರಾತ್ರಿಯೇ ಪಶ್ಚಿಮ ಶ್ರೀಲಂಕಾ ಮತ್ತು ಕೊಲಂಬೋದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜನರು ಹೊರ ಬರದಂತೆ ಮಿಲಿಟರಿ ಮತ್ತು ಪೊಲೀಸರ ಮೂಲಕ ತಡೆ ಹೇರಲಾಗಿದೆ. ಆದರೆ, ಜನರು ಅಧ್ಯಕ್ಷ ಮತ್ತು ಪ್ರಧಾನಿ ರಾಜಿನಾಮೆ ನೀಡುವಂತೆ ಘೋಷಣೆ ಕೂಗುತ್ತಾ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.
ದಕ್ಷಿಣ ಲಂಕಾದ ಗಾಲೆ, ಮೊರಾಟುವಾ, ಮಟಾರಾ ನಗರಗಳಲ್ಲಿ ಜನರು ದಂಗೆ ಎದ್ದಿದ್ದು, ಮಿಲಿಟರಿ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಮತ್ತು ಪ್ರಧಾನಿಯ ಕುಟುಂಬಸ್ಥರ ವಿರುದ್ಧ ಧಿಕ್ಕಾರ ಕೂಗುತ್ತಾ ದೇಶ ಬಿಟ್ಟು ಹೋಗುವಂತೆ ಹಿಂಸಾಚಾರ ಆರಂಭಿಸಿದ್ದಾರೆ.
President Gotabaya Rajapakse has declared a nationwide state of emergency as Sri Lanka witnessed a rebellion.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm