ಬ್ರೇಕಿಂಗ್ ನ್ಯೂಸ್
23-09-20 01:13 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಚಂಬರ್ 23: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಒಂದೇ ದಿನ ಸುರಿದ ಮಳೆಯು 26 ವರ್ಷಗಳ ದಾಖಲೆಯನ್ನೇ ಮುರಿದಿದೆ. ಕಳೆದ 24 ಗಂಟೆಗಳಲ್ಲಿ 273.6 ಮಿಮಿ ನಷ್ಟು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಸಂಜೆ ಶುರುವಾದ ವರುಣನ ರೌದ್ರನರ್ತನ ಬುಧವಾರ ಬೆಳಗ್ಗೆವರೆಗೂ ಮುಂದುವರಿದಿದ್ದು, ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ಈಗಾಗಲೇ ತತ್ತರಿಸಿ ಹೋಗಿದೆ. 1994 ರಿಂದ 2020ರ ಸಪ್ಟೆಂಬರ್ ಅವಧಿಯಲ್ಲಿ ಸುರಿದ 2ನೇ ಅತಿದೊಡ್ಡ ಮಳೆಯಾಗಿದೆ. ಇನ್ನು, 1974 ರಿಂದ 2020 ಸಪ್ಟೆಂಬರ್ ಅವಧಿಯಲ್ಲಿ ಸುರಿದ 4ನೇ ಅತಿದೊಡ್ಡ ಮಳೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮಳೆಯ ಹೊಡೆತಕ್ಕೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಂಬೈ ನಗರದ ಚಿತ್ರಣವೇ ಬದಲಾಗಿದೆ. ಮಳೆ ನೀರಿನ ನಡುವೆ ಸಿಲುಕಿದ ವಾಹನ ಸವಾರರ ಪರದಾಟ, ಮನೆಗಳಿಂದ ಹೊರ ಬರುವುದಕ್ಕೂ ಆಗದಂತೆ ದಿಗ್ಬಂಧನಕ್ಕೆ ಒಳಗಾಗಿರುವ ಜನರು, ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಜನಜೀವನ ಸ್ತಬ್ಧಗೊಂಡಿದೆ.

ಕಳೆದ ಮಂಗಳವಾರ ಸಂಜೆಯಿಂದ ಶುರುವಾದ ಮಳೆಯು ರಾತ್ರಿಯಿಡೀ ಸುರಿದಿದೆ. ಕೊಲಂಬಾದಿಂದ ಭಾಯಂದರ್ ವರೆಗಿನ ಮುಂಬೈನ ಸಂಪೂರ್ಣ ಪಶ್ಚಿಮ ಭಾಗದಲ್ಲಿ ದಟ್ಟವಾದ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ರಾತ್ರಿ 3.30 ರಿಂದ 5.30ರ ನಡುವೆ ಗುಡುಗು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಜನರಲ್ ಕೆ.ಎಸ್.ಹೊಸಲಿಕರ್ ತಿಳಿಸಿದ್ದಾರೆ.


ಮುಂಬೈನಲ್ಲಿ ಸುರಿದ ಮಳೆಯಿಂದ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಠಾಣೆಯ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ವಶಿ ನಡುವಿನ ರೈಲ್ವೆ ಸಂಚಾರವು ಬಂದ್ ಆಗಿದೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ಸಿಯಾನ್-ಕುರ್ಲಾ, ಚುನಭಟ್ಟಿ ಕುರ್ಲಾ ಮತ್ತು ಮಸೀದ್ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರದ ರೈಲುಗಳ ಸಂಚಾರ ಬಂದ್ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am