ಬ್ರೇಕಿಂಗ್ ನ್ಯೂಸ್
05-04-22 12:12 pm HK Desk news ದೇಶ - ವಿದೇಶ
ಕೋಜಿಕ್ಕೋಡ್, ಎ.5 : ಹೊಳೆಯ ನಡುವೆ ಬಂಡೆಯಲ್ಲಿ ನಿಂತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಮಾಡುತ್ತಿದ್ದಾಗ ಮದುಮಗ ಬಂಡೆಯಿಂದ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೋಜಿಕ್ಕೋಡ್ ಜಿಲ್ಲೆಯ ಕುತ್ಯಾಡಿ ನದಿಯಲ್ಲಿ ನಡೆದಿದೆ.
ಮೂರು ವಾರಗಳ ಹಿಂದಷ್ಟೇ ವಿವಾಹಿತರಾಗಿದ್ದ ರೆಜಿನ್ ಲಾಲ್ ಮತ್ತು ಕಾನಿಕಾ ದಂಪತಿ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು. ಹೊಳೆಯ ಮಧ್ಯದ ಬಂಡೆ ಮೇಲೆ ನಿಂತು ಪೋಸು ಕೊಡುತ್ತಿದ್ದ ವೇಳೆ ವರ ರೆಜಿನ್ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಈ ವೇಳೆ ವಧು ಕೂಡ ನೀರಿಗೆ ಬಿದ್ದಿದ್ದು ಸ್ಥಳೀಯರು ಸೇರಿ ಇಬ್ಬರನ್ನೂ ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದು ವಧು ಗಂಭೀರ ಸ್ಥಿತಿಯಲ್ಲಿದ್ದಾಳೆ. ಮಾರ್ಚ್ 14 ರಂದು ಇವರ ವಿವಾಹ ನಡೆದಿತ್ತು.
ಪೆರುವಣ್ಣಮುಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ ರೆಜಿನ್ ಕುಟ್ಟಿಯಾಡಿ ಪರಿಸರದ ನಿವಾಸಿಯಾಗಿದ್ದು ನದಿಯ ಅಪಾಯದ ಬಗ್ಗೆ ಅರಿವು ಹೊಂದಿದ್ದ. ನದಿಯಲ್ಲಿ ಆಗಿಂದಾಗ್ಗೆ ಅಲೆಗಳು ಬರುವುದು, ಬಂಡೆಗೆ ಅಪ್ಪಳಿಸುವುದರಿಂದ ಅಪಾಯ ಎಂದು ಬೋರ್ಡ್ ಹಾಕಲಾಗಿತ್ತು. ಕುಟ್ಟಿಯಾಡಿಯ ಜಾನಕಿಪುಝ ಹೊಳೆಯ ಮಧ್ಯೆ ದಂಪತಿ ಫೋಟೋ ಶೂಟ್ ಮಾಡುತ್ತಿದ್ದರು.
ಬಂಡೆಗಳ ಆಕರ್ಷಣೆಯ ನಡುವೆ ಆಳವಾದ ಹೊಂಡವಿದೆ. ಹಾಗಾಗಿ ಅಲ್ಲಿಗೆ ತೆರಳುವುದು ಅಪಾಯ ಎಂದು ಸೂಚನೆ ನೀಡಲಾಗಿತ್ತು. ಇಕೋ ಟೂರಿಸಂ ಹೆಸರಲ್ಲಿ ಫೋಟೋ ಶೂಟ್ ಮಾಡಲೆಂದು ಪ್ರವಾಸಿಗರು ಬರುತ್ತಿದ್ದರು. ಆದರೆ ಸ್ಥಳೀಯ ವ್ಯಕ್ತಿಯೇ ಆಗಿರುವ ರೆಜಿನ್, ಅದೇ ಹೊಳೆಯಲ್ಲಿ ನೀರಿಗೆ ಬಿದ್ದು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ಇದೇ ಜಾಗದಲ್ಲಿ ಈ ಹಿಂದೆಯೂ ದುರಂತ ಸಂಭವಿಸಿದ್ದರಿಂದ ಫೋಟೋ ಶೂಟ್ ಮಾಡದಂತೆ ನಿಷೇಧ ಹಾಕಲಾಗಿತ್ತು.
A post-wedding shoot has turned tragic for a groom, who drowned in the Kuttiadipuzha in Kozhikode. The accident happened at Janakikadupuzha in Kuttiadi, Kozhikode. The dead has been identified as Rejil of Kadiyangad in Kuttiadi. Though his wife got stuck in the water currents, was able to save her. She has been admitted in the hospital in a serious condition.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm