ಬ್ರೇಕಿಂಗ್ ನ್ಯೂಸ್
24-09-20 10:04 am Headline Karnataka News Network ದೇಶ - ವಿದೇಶ
ಸೂರತ್, ಸೆಪ್ಟಂಬರ್ 24: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.
ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.
ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Major blast in #surat #hazira Any details regarding this if someone knows ? pic.twitter.com/xUitwyOFwZ
— Dhiraj Khanchandani (@dhiraj_k12) September 23, 2020
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm