ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am