ಬ್ರೇಕಿಂಗ್ ನ್ಯೂಸ್
24-09-20 10:35 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 24: ಕೊರೋನ ಸೋಂಕಿನಿಂದಾಗಿ ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಗುರುವಾರ ತಿಳಿಸಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ದೇಹಸ್ಥಿತಿ ಮತ್ತೆ ಹದಗೆಟ್ಟಿರುವುದರಿಂದ ಅವರನ್ನು ಗರಿಷ್ಠ ಜೀವರಕ್ಷಕ ವ್ಯವಸ್ಥ್ತೆಯಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧಾ ಭಾಸ್ಕರನ್ ಅವರು ತಿಳಿಸಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಕೊರೋನ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಿಸಿದಾಗ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ, ಕೃತಕ ಉಸಿರಾಟ ವ್ಯವಸ್ಥೆಯಲ್ಲಿರಿಸಲಾಗಿತ್ತು
ಸೆಪ್ಟೆಂಬರ್ 19ರಂದು ಅವರ ಪುತ್ರ ಚರಣ್ ಅವರು ಟ್ವೀಟ್ ಮಾಡಿ, ತನ್ನ ತಂದೆ ಜೀವರಕ್ಷಕ ವ್ಯವಸ್ಥೆಯಲ್ಲಿಯೇ ಇರುವರಾದರೂ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರಿಗೆ ಬಾಯಿ ಮೂಲಕ ಆಹಾರ ನೀಡುವುದನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm