ಬ್ರೇಕಿಂಗ್ ನ್ಯೂಸ್
25-09-20 02:56 pm Headline Karnataka News Network ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 25: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆ ಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್ಪಿಬಿ ಸಾಧನೆಯ ಬಗ್ಗೆ ಹೇಳಿದ್ದಾರೆ.
ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR
— B.S. Yediyurappa (@BSYBJP) September 25, 2020
ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ. (3/3) pic.twitter.com/S6SHgjPJVy
— B.S. Yediyurappa (@BSYBJP) September 25, 2020
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm