ಬ್ರೇಕಿಂಗ್ ನ್ಯೂಸ್
06-05-22 06:23 pm HK Desk News ದೇಶ - ವಿದೇಶ
ನವದೆಹಲಿ, ಮೇ 6: ಕೊರೊನಾ ಕಾಲದಲ್ಲಿ ಭಾರತದಲ್ಲಿ ಅಂದಾಜು 47 ಲಕ್ಷ ಜನರು ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ, ಭಾರತ ಸರಕಾರ ಕೊಟ್ಟಿರುವ ಮಾಹಿತಿಗಳಿಂದ ಹೊರತಾದ ಅಂಕಿ ಸಂಖ್ಯೆಗಳನ್ನು ನೀಡುವ ಮೂಲಕ ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಜನರಿಗೆ ಮತ್ತು ಆರೋಗ್ಯ ಕ್ಷೇತ್ರವನ್ನು ತಪ್ಪು ದಾರಿಗೆಳೆಯುವಂತೆ ಮಾಡಿದೆ ಎಂದು ಹೇಳಿದೆ.
ಕೋವಿಡ್ 19 ಕಾರಣದಿಂದ ಇಡೀ ಜಗತ್ತಿನಲ್ಲಿ ಅಂದಾಡು 14.9 ಮಿಲಿಯನ್ ಜನರು ಕೊರೊನಾದ ನೇರ ಮತ್ತು ಪರೋಕ್ಷ ಪರಿಣಾಮದಿಂದ ಸಾವಿಗೀಡಾಗಿದ್ದಾರೆ. ಆ ಪೈಕಿ ಬಾರತದಲ್ಲಿ 4.7 ಮಿಲಿಯನ್(47 ಲಕ್ಷ) ಜನರು ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎರಡು ದಿನಗಳ ಹಿಂದೆ ಹೇಳಿಕೆ ಬಿಡುಗಡೆ ಮಾಡಿತ್ತು. ಆದರೆ ಭಾರತದಲ್ಲಿ ಸರಕಾರದ ಅಧಿಕೃತ ಮಾಹಿತಿ ಪ್ರಕಾರ ಈವರೆಗೆ 5.24 ಲಕ್ಷ ಜನರು ಕೊರೊನಾ ಕಾರಣದಿಂದ ಸಾವು ಕಂಡಿದ್ದಾರೆ. 2020ರ ಡಿಸೆಂಬರ್ ನಿಂದ 2021ರ ಜನವರಿ ವರೆಗಿನ ಅವಧಿಯಲ್ಲಿ ಜಗತ್ತಿನಲ್ಲಿ ಕೊರೊನಾ ಸೋಂಕಿನ ನೇರ ಮತ್ತು ಪರೋಕ್ಷ ಪರಿಣಾಮಗಳಿಂದ ಸಾವು ಸಂಭವಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯು ಪ್ರಕಟಿಸಿತ್ತು.

ಭಾರತ ಸರಕಾರ ನೀಡಿರುವ ಅಧಿಕೃತ ಮಾಹಿತಿಯಲ್ಲದೆ, ಹೆಚ್ಚಿನ ಸಂಖ್ಯೆಯನ್ನು ತೋರಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಕ್ರಮವನ್ನು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಅಂಕಿ ಅಂಶಗಳ ಆಧಾರದಲ್ಲಿ ಸಾವಿನ ಸಂಖ್ಯೆಯನ್ನು ಹೆಚ್ಚು ತೋರಿಸಲಾಗಿದೆ ಎಂದು ಪ್ರಶ್ನೆ ಮಾಡಿದೆ.
ಭಾರತ ಸರಕಾರದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಹಾಗೂ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿನ ಆರೋಗ್ಯ ನೀತಿಗಳು, ವ್ಯವಸ್ಥೆಗಳಲ್ಲಿ ಲೋಪ ಆಗಿದ್ದರೆ ಹೇಳಬೇಕು. ಅದು ಬಿಟ್ಟು ಮಾಧ್ಯಮಗಳದ್ದೋ, ಯಾವುದೋ ವೆಬ್ ಸೈಟ್ ಗಳದ್ದೋ ಮಾಹಿತಿಯನ್ನು ಆಧರಿಸಿ ಸಾವಿನ ಸಂಖ್ಯೆಯನ್ನು ಅಂದಾಜಿಸುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ಕ್ರಮಕ್ಕೆ ನಾವು ಆಕ್ಷೇಪಿಸುತ್ತೇವೆ ಎಂದು ಹೇಳಿದ್ದಾರೆ.
A top health ministry source has called the World Health Organisation's finding that 4.7 million people had died in India directly due to Covid or due to the pandemic’s impact on health systems and society "mischievous".The official said: “The data was presented in advance to WHO. It could have analysed the data instead of adding a footnote at the bottom. The WHO’s action was mischievous.”
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm