ಬ್ರೇಕಿಂಗ್ ನ್ಯೂಸ್
09-05-22 06:00 pm HK Desk News ದೇಶ - ವಿದೇಶ
ಕೊಲಂಬೋ, ಮೇ 9: ತುರ್ತು ಪರಿಸ್ಥಿತಿಯನ್ನೂ ಲೆಕ್ಕಿಸದೆ ಜನರು ಹಿಂಸಾಚಾರಕ್ಕಿಳಿದ ಬೆನ್ನಲ್ಲೇ ಶ್ರೀಲಂಕಾ ಪ್ರಧಾನಿ ಮಹೀಂದ್ರಾ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜಧಾನಿ ಕೊಲಂಬೋ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಪ್ರತಿಭಟನೆ, ದಂಗೆ ಎದ್ದಿರುವ ಘಟನೆಗಳು ನಡೆದಿದ್ದು ಸರಕಾರದ ಬೆಂಬಲಿಗರು ಮತ್ತು ವಿರೋಧಿ ಪ್ರತಿಭಟನಾಕಾರರು ನಡುವೆ ಹಿಂಸಾಚಾರ ನಡೆದು ನೂರಾರು ಮಂದಿ ಗಾಯಗೊಂಡಿದ್ದಾರೆ.
76 ವರ್ಷದ ಪ್ರಧಾನಿ ಮಹೀಂದ್ರಾ ರಾಜಪಕ್ಸ ಅವರು ತನ್ನ ತಮ್ಮ ಅಧ್ಯಕ್ಷ ಸ್ಥಾನದಲ್ಲಿರುವ ಗೊಟಬಾಯ ರಾಜಪಕ್ಸ ಅವರಿಗೆ ಪತ್ರದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದೇ ವೇಳೆ, ಒಮ್ಮತದ ಸರಕಾರ ರಚಿಸುವುದಕ್ಕೆ ಒಲವು ತೋರಿದ್ದಾರೆ. ಸೋಮವಾರ ಬೆಳಗ್ಗೆ ಪ್ರತಿಭಟನೆ, ಹಿಂಸಾಚಾರದ ನಡುವೆಯೂ ಅಧಿಕಾರ ಬಿಟ್ಟು ಕೊಡಲ್ಲ ಎಂದು ಮಹೀಂದ್ರಾ ರಾಜಪಕ್ಸ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜಿನಾಮೆ ರವಾನಿಸಿ ನೂತನ ಸರಕಾರ ರಚಿಸಲು ಅನುವು ಮಾಡುತ್ತಿರುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ.

ಈಗಿನ ಸನ್ನಿವೇಶಕ್ಕೆ ಕಾರಣವಾಗಿರುವ ಪ್ರಧಾನಿ ಮತ್ತು ಅಧ್ಯಕ್ಷರು ರಾಜಿನಾಮೆ ಕೊಟ್ಟು ತೊಲಗಬೇಕೆಂದು ಎರಡು ತಿಂಗಳಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದಿಢೀರ್ ಏರಿಕೆ ಆಗಿರುವುದರಿಂದ ಜನರು ಬದುಕಲು ಕಷ್ಟ ಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸಿಗದೆ ಜನರು ಪರದಾಡುತ್ತಿದ್ದಾರೆ. ಜನರು ಒಂದೇ ಸಮನೆ ಪ್ರತಿಭಟನೆ, ಹಿಂಸಾಚಾರಕ್ಕೆ ಇಳಿದಿರುವುದರಿಂದ ವಾರದ ಹಿಂದೆ ಮತ್ತೆ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು.
ಇಪ್ಪತ್ತು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಶ್ರೀಲಂಕಾದಲ್ಲಿ ಒಂದೇ ಕುಟುಂಬದ ಅಧಿಪತ್ಯ ಇದೆ. ಈ ಅವಧಿಯಲ್ಲಿ ಜನರನ್ನು ಓಲೈಸುತ್ತಾ ರಾಜಕಾರಣ ನಡೆಸಿರುವುದರಿಂದ ಶ್ರೀಲಂಕಾ ರೂಪಾಯಿ ಬೆಲೆ ಕಳಕೊಂಡಿದೆ. ಇದರಿಂದಾಗಿ ಜನರು ಸರಕಾರದ ವಿರುದ್ಧ ದಂಗೆ ಎದ್ದಿದ್ದು, ಇನ್ನಾದರೂ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಬಿದ್ದೀತಾ ಎನ್ನುವ ಆಶಯ ಉಂಟಾಗಿದೆ. ಮಹೀಂದ್ರಾ ರಾಜಪಕ್ಸ ಅವರೇ ಬಹುಕಾಲದಿಂದ ತನ್ನ ಕುಟುಂಬ ಸದಸ್ಯರನ್ನು ಪ್ರಮುಖ ಸ್ಥಾನಗಳಲ್ಲಿ ಇಟ್ಟುಕೊಂಡು ಒಟ್ಟು ಸರಕಾರವನ್ನು ನಿಯಂತ್ರಿಸುತ್ತಿದ್ದರು.
Amid the worst economic crisis the country has seen since independence, Sri Lankan Prime Minister Mahinda Rajapaksa resigned from his post on Monday. Sri Lanka's health minister Prof Channa Jayasumana has also handed over his letter of resignation to the President.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm