ಬ್ರೇಕಿಂಗ್ ನ್ಯೂಸ್
25-09-20 09:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 26: ಜಿಎಸ್ ಟಿಯ ಕೇಂದ್ರದ ಪಾಲು ರಾಜ್ಯಕ್ಕೆ ಬಂದಿಲ್ಲ ಎಂಬ ದೂರಿನ ನಡುವೆಯೇ ಕೇಂದ್ರ ಸರಕಾರ ಜಿಎಸ್ ಟಿ ಸಂಗ್ರಹದಲ್ಲಿ ಎಡವಟ್ಟು ಮಾಡಿಕೊಂಡಿರುವುದು ಬಯಲಾಗಿದೆ. ರಾಜ್ಯಗಳಿಗೆ ಪರಿಹಾರ ನೀಡುವುದಕ್ಕಾಗಿ ಸಂಗ್ರಹಿಸಿದ ಜಿಎಸ್ ಟಿ ಸೆಸ್ ಪಾಲಿನ ಎರಡು ವರ್ಷದ 42,272 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಬೇರೆಡೆಗೆ ವರ್ಗಾಯಿಸಿರುವ ಬಗ್ಗೆ ಸಿಎಜಿ ಪತ್ತೆ ಮಾಡಿದೆ.
ಲೆಕ್ಕ ಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಾಜ್ಯ ಸರಕಾರಗಳಿಗೆ ನೀಡಲೆಂದೇ ಇರುವ ಈ ಹಣವನ್ನು ಜಿಎಸ್ ಟಿ ಪರಿಹಾರ ಸೆಸ್ ಸಂಗ್ರಹ ನಿಧಿಗೇ ಜಮೆ ಮಾಡಬೇಕಾಗಿತ್ತು. ಆದರೆ, ಕೇಂದ್ರ ಸರಕಾರ ಜಿಎಸ್ ಟಿ ಜಾರಿಗೆ ಬಂದ 2017 ಮತ್ತು 2018ರ ಎರಡು ವರ್ಷಗಳಲ್ಲಿ ಹೀಗೆ ಸಂಗ್ರಹವಾದ ಹಣವನ್ನು ಜಿಎಸ್ ಟಿ ನಿಧಿಯಲ್ಲಿ ಉಳಿಸಿಕೊಳ್ಳದೇ ಇತರೇ ಉಪಯೋಗಕ್ಕೆ ಬಳಸಿಕೊಂಡಿದೆ ಅನ್ನುವ ಅನುಮಾನ ಕೇಳಿಬಂದಿದೆ.

ಸಿಎಜಿ ಪ್ರಕಾರ, 2017-18ರಲ್ಲಿ 62,612 ಕೋಟಿ ರೂಪಾಯಿ ಜಿಎಸ್ ಟಿ ಸೆಸ್ ಸಂಗ್ರಹವಾಗಿತ್ತು. ಈ ಪೈಕಿ 54,146 ಕೋಟಿ ರೂಪಾಯಿ ಮಾತ್ರ ಜಿಎಸ್ ಟಿ ಪರಿಹಾರ ನಿಧಿಗೆ ಜಮೆಯಾಗಿದೆ. ಇನ್ನು 2018-19ರಲ್ಲಿ ಸಂಗ್ರಹಗೊಂಡ 95,081 ಜಿಎಸ್ ಟಿ ಸೆಸ್ ಪೈಕಿ 54,275 ಕೋಟಿ ರೂ.ಗಳನ್ನು ಜಮೆ ಮಾಡಲಾಗಿತ್ತು. ಹೀಗೆ ಎರಡು ಅವಧಿಗಳಲ್ಲಿ ಜಿಎಸ್ ಟಿ ಸೆಸ್ ಹಣವನ್ನು ಕೇಂದ್ರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವುದನ್ನು ಸಿಎಜಿ ಪತ್ತೆ ಮಾಡಿದೆ.
ಜಿಎಸ್ ಟಿ ಪರಿಹಾರ ಸೆಸ್ ಕಾಯ್ದೆ ಪ್ರಕಾರ, ಸಂಗ್ರಹಗೊಂಡ ಪೂರ್ತಿ ಹಣವನ್ನು ಪರಿಹಾರ ನಿಧಿಗೇ ಜಮೆ ಮಾಡಬೇಕಾಗುತ್ತದೆ. ಅಲ್ಲದೆ, ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿಯಮ ಇರುತ್ತದೆ. ಈ ರೀತಿ ಜಿಎಸ್ ಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಉಳಿಸಿಕೊಳ್ಳುವುದು ಜಿಎಸ್ ಟಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm