ಬ್ರೇಕಿಂಗ್ ನ್ಯೂಸ್
10-05-22 09:14 pm HK Desk News ದೇಶ - ವಿದೇಶ
ನವದೆಹಲಿ, ಮೇ 10 : ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ತನ್ನ ಸಹ ಆಟಗಾರ ಮತ್ತು ಮಾಜಿ ನಾಯಕ ಶಾಹಿದ್ ಅಫ್ರಿದಿ ವಿರುದ್ಧ ಮತ್ತೆ ಮತಾಂತರ ಯತ್ನದ ಆರೋಪ ಮಾಡಿದ್ದಾರೆ. ಕಳೆದ ವಾರ ಕನೇರಿಯಾ, 'ಅಫ್ರಿದಿ ನನ್ನನ್ನು ಇಸ್ಲಾಂಗೆ ಮತಾಂತರಗೊಳ್ಳಲು ಒತ್ತಾಯಿಸಿದ್ದರು. ಆದರೆ ನಾನು ನನ್ನ ಧರ್ಮವನ್ನೇ ನಂಬಿದ್ದೆ' ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅಫ್ರಿದಿ, ಕನೇರಿಯಾ ಹಣ ಮತ್ತು ಪ್ರಚಾರಕ್ಕೆ ಈ ರೀತಿ ಹೇಳುತ್ತಿದ್ದಾರೆ. ಶತ್ರು ದೇಶಕ್ಕೆ ಧಾರ್ಮಿಕ ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ' ಎಂದಿದ್ದರು.
ಸೋಮವಾರ ಮತ್ತೆ ಈ ಬಗ್ಗೆ ಟ್ವೀಟ್ ಮಾಡಿದ ದಾನೀಶ್ ಕನೇರಿಯಾ, 'ಒತ್ತಾಯದ ಮತಾಂತರದ ವಿರುದ್ಧ ಧ್ವನಿ ಎತ್ತಿದಾಗ ನನ್ನ ಕ್ರಿಕೆಟ್ ಬದುಕು ಅಂತ್ಯಗೊಳಿಸುವ ಬೆದರಿಕೆ ಹಾಕಲಾಗಿತ್ತು. ಭಾರತ ನಮ್ಮ ಶತ್ರು ರಾಷ್ಟ್ರವಲ್ಲ. ಹಾಗೆ ಪರಿಗಣಿಸಿದರೆ ನೀವು ಭಾರತೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬೇಡಿ' ಎಂದು ಅಫ್ರಿದಿಯನ್ನು ಕುಟುಕಿದ್ದಾರೆ.
ಭಾರತವು ನಮ್ಮ ಶತ್ರು ರಾಷ್ಟ್ರವಲ್ಲ. ನಮ್ಮ ನಿಜವಾದ ಶತ್ರುಗಳೆಂದರೆ, ಧರ್ಮದ ಹೆಸರಿನಲ್ಲಿ ಜನರಿಗೆ ಪ್ರಚೋದನೆ ಮಾಡುವವರು. ಹಾಗೊಂದು ವೇಳೆ ನೀವು ಭಾರತವನ್ನು ಶತ್ರು ರಾಷ್ಟ್ರ ಎಂದು ಕರೆಯುವುದಾದರೆ, ನೀವು ಯಾವತ್ತೂ ಭಾರತೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹೋಗಬೇಡಿ ಎಂದು ಶಾಹಿದ್ ಅಫ್ರಿದಿಗೆ ಸವಾಲೆಸೆದಿದ್ದಾರೆ.
ಈ ಹಿಂದೆ ದಾನಿಶ್ ಕನೇರಿಯಾ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಹಿದ್ ಅಫ್ರಿದಿ, ಅವರಿಗೆ ಈ ರೀತಿಯ ತೊಂದರೆಯಾಗಿದ್ದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ದೂರು ನೀಡಬೇಕಿತ್ತು, ಅದನ್ನು ಬಿಟ್ಟು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದಲ್ಲ ಎಂದು ಪಾಕಿಸ್ತಾನದ ಮಾಜಿ ನಾಯಕ ಅಫ್ರಿದಿ ಹೇಳಿದ್ದರು.
ನನ್ನ ವರ್ತನೆ ತಪ್ಪಾಗಿದ್ದರೆ, ನೀವ್ಯಾಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ದೂರು ನೀಡಲಿಲ್ಲ. ಅವರು ನಮ್ಮ ಶತ್ರು ರಾಷ್ಟ್ರದಲ್ಲಿ ಧಾರ್ಮಿಕ ಭಾವನೆಗಳನ್ನು ಇಟ್ಟುಕೊಂಡು ಸಂದರ್ಶನ ನೀಡುತ್ತಿದ್ದಾರೆ. ನಮ್ಮ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಇವರು ತಮ್ಮದೇ ಚಾರಿತ್ರ್ಯವನ್ನು ನೋಡಿಕೊಳ್ಳಲಿ ಎಂದು ಕನೇರಿಯಾ ಅವರಿಗೆ ಅಫ್ರಿದಿ ತಿರುಗೇಟು ನೀಡಿದ್ದರು.
Former Pakistan leg-spinner Danish Kaneria has accused Shahid Afridi of instigating people in the name of religion. “India is not our enemy. Our enemies are those who instigate people in the name of religion. If you consider India as your enemy, then don’t ever go to any Indian media channel,” tweeted Kaneria on Monday. The spinner has bagged 261 wickets in 61 Test matches for Pakistan.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm